<p><strong>ಕಲಬುರ್ಗಿ: </strong>ನಗರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ಎರಡು ಮನೆಗಳ ಗೋಡೆ ಕುಸಿದಿವೆ. ತಗ್ಗು ಪ್ರದೇಶದ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಇಲ್ಲಿನ ಶೇಖ್ ರೋಜಾ ಬಡಾವಣೆಯ ಕಾವೇರಿ ನಗರದಲ್ಲಿ 30ಕ್ಕೂ ಹೆಚ್ಚು ಮನೆಗಳ ಸುತ್ತ ಮಳೆ ನೀರು ನಿಂತು, ಸಂಚಾರಕ್ಕೆ ಅಡಚಣೆ ಉಂಟಾಯಿತು. ಮತ್ತೆ ಕೆಲ ಮನೆಯೊಳಗೇ ನೀರು ನುಗ್ಗಿದ್ದರಿಂದ ನಿವಾಸಿಗಳು ಇಡೀ ರಾತ್ರಿ ಜಾಗರಣೆ ಮಾಡಬೇಕಾಯಿತು.</p>.<p>ಮನೆಯಲ್ಲಿನ ದಿನಸಿ ಸಾಮಗ್ರಿಗಳು, ಬಟ್ಟೆ ಇತರೆ ದಿನಬಳಕೆ ವಸ್ತುಗಳು ತೋಯ್ದವು. ಚರಂಡಿಗಳು ಇಲ್ಲದ ಕಾರಣ ನೀರು ರಸ್ತೆಯ ಮೇಲೇ ಹರಿಯಿತು. ಮತ್ತೆ ಕೆಲವು ಕಡೆ ಒಳಚರಂಡಿಯಲ್ಲಿ ಕಸ ಕಡ್ಡಿ ತುಂಬಿದ್ದರಿಂದ ನೀರು ಸರಾಗವಾಗಿ ಹರಿದು ಹೋಗಲಿಲ್ಲ.</p>.<p>ಪ್ರತಿ ಮಳೆಗಾಲದಲ್ಲೂ ಶೇಖ್ ರೋಜಾ ಬಡಾವಣೆಯಲ್ಲಿ ಇದೇ ಸ್ಥಿತಿ ಮುಂದುವರಿಯುತ್ತದೆ. ಹಲವು ಬಾರಿ ಮನವಿ, ಪ್ರತಿಭಟನೆ ನಡೆಸಿದರೂ ಪಾಲಿಕೆ ಅಧಿಕಾರಿಗಳು ಗಮನ ಕೊಟ್ಟಿಲ್ಲ. ಚರಂಡಿಗಳನ್ನು ಈಗಲಾದರೂ ಸರಿ ಮಾಡಿಸಿ, ಜನರ ಗೋಳು ನಿವಾರಿಸಬೇಕು ಎಂದು ಸ್ಥಳೀಯರು ಅಳಲು ತೋಡಿಕೊಂಡರು.</p>.<p><strong>ಕುಸಿದ ಗೋಡೆ, ತಪ್ಪಿದ ಅನಾಹುತ: </strong>ಭವಾನಿ ಚೌಕ ಬಳಿ ಮನೆಯ ಗೋಡೆ ಕುಸಿದು ಬಿದ್ದು, ಅಪಾರ ನಷ್ಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.<br /><br />ಇಲ್ಲಿನ ಓಂಪ್ರಕಾಶ್ ಗೌಂವಾರ ಎಂಬುವವರ ಮನೆ ಗೋಡೆ ಕುಸಿದಿದೆ. ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾಳಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>ಭಾನುವಾರ ರಾತ್ರಿಯೂ ಕೆಲ ಹೊತ್ತು ಜಿಟಿಜಿಟಿ ಮಳೆ ಸುರಿಯಿತು. ಪ್ರಮುಖ ಉದ್ಯಾನವನಗಳು ಕೆಸರಿಂದ ಆವೃತವಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ನಗರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ಎರಡು ಮನೆಗಳ ಗೋಡೆ ಕುಸಿದಿವೆ. ತಗ್ಗು ಪ್ರದೇಶದ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.</p>.<p>ಇಲ್ಲಿನ ಶೇಖ್ ರೋಜಾ ಬಡಾವಣೆಯ ಕಾವೇರಿ ನಗರದಲ್ಲಿ 30ಕ್ಕೂ ಹೆಚ್ಚು ಮನೆಗಳ ಸುತ್ತ ಮಳೆ ನೀರು ನಿಂತು, ಸಂಚಾರಕ್ಕೆ ಅಡಚಣೆ ಉಂಟಾಯಿತು. ಮತ್ತೆ ಕೆಲ ಮನೆಯೊಳಗೇ ನೀರು ನುಗ್ಗಿದ್ದರಿಂದ ನಿವಾಸಿಗಳು ಇಡೀ ರಾತ್ರಿ ಜಾಗರಣೆ ಮಾಡಬೇಕಾಯಿತು.</p>.<p>ಮನೆಯಲ್ಲಿನ ದಿನಸಿ ಸಾಮಗ್ರಿಗಳು, ಬಟ್ಟೆ ಇತರೆ ದಿನಬಳಕೆ ವಸ್ತುಗಳು ತೋಯ್ದವು. ಚರಂಡಿಗಳು ಇಲ್ಲದ ಕಾರಣ ನೀರು ರಸ್ತೆಯ ಮೇಲೇ ಹರಿಯಿತು. ಮತ್ತೆ ಕೆಲವು ಕಡೆ ಒಳಚರಂಡಿಯಲ್ಲಿ ಕಸ ಕಡ್ಡಿ ತುಂಬಿದ್ದರಿಂದ ನೀರು ಸರಾಗವಾಗಿ ಹರಿದು ಹೋಗಲಿಲ್ಲ.</p>.<p>ಪ್ರತಿ ಮಳೆಗಾಲದಲ್ಲೂ ಶೇಖ್ ರೋಜಾ ಬಡಾವಣೆಯಲ್ಲಿ ಇದೇ ಸ್ಥಿತಿ ಮುಂದುವರಿಯುತ್ತದೆ. ಹಲವು ಬಾರಿ ಮನವಿ, ಪ್ರತಿಭಟನೆ ನಡೆಸಿದರೂ ಪಾಲಿಕೆ ಅಧಿಕಾರಿಗಳು ಗಮನ ಕೊಟ್ಟಿಲ್ಲ. ಚರಂಡಿಗಳನ್ನು ಈಗಲಾದರೂ ಸರಿ ಮಾಡಿಸಿ, ಜನರ ಗೋಳು ನಿವಾರಿಸಬೇಕು ಎಂದು ಸ್ಥಳೀಯರು ಅಳಲು ತೋಡಿಕೊಂಡರು.</p>.<p><strong>ಕುಸಿದ ಗೋಡೆ, ತಪ್ಪಿದ ಅನಾಹುತ: </strong>ಭವಾನಿ ಚೌಕ ಬಳಿ ಮನೆಯ ಗೋಡೆ ಕುಸಿದು ಬಿದ್ದು, ಅಪಾರ ನಷ್ಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.<br /><br />ಇಲ್ಲಿನ ಓಂಪ್ರಕಾಶ್ ಗೌಂವಾರ ಎಂಬುವವರ ಮನೆ ಗೋಡೆ ಕುಸಿದಿದೆ. ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾಳಾಗಿವೆ ಎಂದು ಅವರು ಮಾಹಿತಿ ನೀಡಿದರು.</p>.<p>ಭಾನುವಾರ ರಾತ್ರಿಯೂ ಕೆಲ ಹೊತ್ತು ಜಿಟಿಜಿಟಿ ಮಳೆ ಸುರಿಯಿತು. ಪ್ರಮುಖ ಉದ್ಯಾನವನಗಳು ಕೆಸರಿಂದ ಆವೃತವಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>