ಇಲ್ಲಿನ ಲಾಳಗೇರಿ, ಸೂಪರ್ ಮಾರ್ಕೆಟ್, ಕಣ್ಣಿ ಮಾರುಕಟ್ಟೆ, ಶಹಾಬಜಾರ್, ಆಳಂದ ಚೌಕ, ಮುಸ್ಲಿಂ ಚೌಕ, ಗಾಜಿಯಾಬಾದ್, ದರ್ಗಾ ಬಡಾವಣೆ, ಸೋನಾಯಾ ನಗರ, ವೀರೇಂದ್ರ ಪಾಟೀಲ ಬಡಾವಣೆ, ವಿಶ್ವವಿದ್ಯಾಲಯ ಪ್ರದೇಶ, ಹೈಕೋರ್ಟ್ ಸೇರಿದಂತೆ ಪ್ರಮುಖ ರಸ್ತೆ, ವೃತ್ತಗಳಲ್ಲೂ ನೀರು ನಿಂತುಕೊಂಡಿತ್ತು. ವೆಂಕಟೇಶ್ವರ ನಗರ, ಶಕ್ತಿನಗರ, ಶಾಸ್ತ್ರಿನಗರ, ಮಹಾವೀರ ನಗರ, ಮೋಮಿನ್ಪುರ, ವೀರೇಂದ್ರ ಪಾಟೀಲ ಬಡಾವಣೆ, ಎಪಿಎಂಸಿ ಪ್ರದೇಶ ಸೇರಿದಂತೆ ನಗರದ ಹೊರವಲಯದಲ್ಲೂ ಭಾರಿ ಮಳೆಯಾಯಿತು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರ ಅಡಚಣೆ ಉಂಟಾಯಿತು.