<figcaption>""</figcaption>.<figcaption>""</figcaption>.<figcaption>""</figcaption>.<p><strong>ಚಿಂಚೋಳಿ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನಲ್ಲಿ ಬುಧವಾರ ಸುಮಾರು 180 ಮಿ.ಮೀ ಮಳೆ ಸುರಿದಿದೆ. ಸುಲೇಪೇಟ 101, ಚಿಮ್ಮನಚೋಡ 90, ಕುಂಚಾವರಂ 60, ನಿಡಗುಂದಾ 49, ಕೋಡ್ಲಿ 35 ಮಿ.ಮೀ ಮಳೆ ದಾಖಲಾಗಿದೆ.</p>.<p>ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯ ಹೆದ್ದಾರಿ 15ರಲ್ಲಿನ ಐನೋಳ್ಳಿ ಮತ್ತು ನಾಗಾಈದಲಾಯಿ ಬಳಿ ಸೇತುವೆ ಪ್ರವಾಹದ ನೀರಿಗೆ ಕೊಚ್ಚಿಕೊಂಡು ಹೋಗಿದ್ದರಿಂದ ಚಿಂಚೋಳಿ ಬೀದರ್ ಮಧ್ಯೆ ಸಂಪರ್ಕ ಕಡಿತವಾಗಿದೆ.</p>.<p>ಚಿಂಚೋಳಿ ಪಟ್ಟಣದಲ್ಲಿಯೂ ಸೇತುವೆಯ ಕೆಳಭಾಗದ ಮಣ್ಣು ಕೊಚ್ಚಿಕೊಂಡು ಹೋಗಿದ್ದರಿಂದ ಡಾಂಬರ ರಸ್ತೆ ಕುಸಿದಿದೆ. ಇದರಿಂದ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಚಿಂಚೋಳಿ ಪಟ್ಟಣದಲ್ಲಿ ನೀರು ಹರಿಯಲು ಉಂಟಾಗಿದ್ದ ಅಡೆತಡೆಗಳನ್ನು ಪುರಸಭೆ ಮುಖ್ಯಾಧಿಕಾರಿ ಅಭಯಕುಮಾರ ಎದುರು ನಿಂತು ಜೆಸಿಬಿಯಿಂದ ತೆರವುಗೊಳಿಸಿದರು.</p>.<p>ತಹಶೀಲ್ದಾರ ಅರುಣಕುಮಾರ ಕುಲಕರ್ಣಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದರು.</p>.<p>ಕಾಳಗಿ ನೀಲಕಂಠ ಕಾಳೇಶ್ವರ ದೇವಸ್ಥಾನಕ್ಕೆ ನೀನು ನುಗ್ಗಿದೆ. ಅಧಿಕ ಅಮಾವಾಸ್ಯೆ ನಿಮಿತ್ತ ದರ್ಶನ ಪಡೆಯಲು ಆಗಮಿಸಿದ ಭಕ್ತರು ಪರದಾಡುವಂತಾಯಿತು. ಕಾಳಗಿ - ಕೊಡದೂರ ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ನೀರಿನ ಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.</p>.<div style="text-align:center"><figcaption>ಕಾಳಗಿ ನೀಲಕಂಠ ಕಾಳೇಶ್ವರ ದೇವಸ್ಥಾನಕ್ಕೆ ನೀನು ನುಗ್ಗಿದೆ.</figcaption></div>.<div style="text-align:center"><figcaption><em><strong>ಅಧಿಕ ಅಮಾವಾಸ್ಯೆ ನಿಮಿತ್ತ ದರ್ಶನ ಪಡೆಯಲು ಆಗಮಿಸಿದ ಭಕ್ತರು ಪರದಾಡುವಂತಾಯಿತು.</strong></em></figcaption></div>.<div style="text-align:center"><figcaption><em><strong>ಕಾಳಗಿ - ಕೊಡದೂರ ಸಂಪರ್ಕ ಸೇತುವೆ ಮುಳುಗಡೆಯಾಗಿದೆ.</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<figcaption>""</figcaption>.<p><strong>ಚಿಂಚೋಳಿ (ಕಲಬುರ್ಗಿ ಜಿಲ್ಲೆ): </strong>ತಾಲ್ಲೂಕಿನಲ್ಲಿ ಬುಧವಾರ ಸುಮಾರು 180 ಮಿ.ಮೀ ಮಳೆ ಸುರಿದಿದೆ. ಸುಲೇಪೇಟ 101, ಚಿಮ್ಮನಚೋಡ 90, ಕುಂಚಾವರಂ 60, ನಿಡಗುಂದಾ 49, ಕೋಡ್ಲಿ 35 ಮಿ.ಮೀ ಮಳೆ ದಾಖಲಾಗಿದೆ.</p>.<p>ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯ ಹೆದ್ದಾರಿ 15ರಲ್ಲಿನ ಐನೋಳ್ಳಿ ಮತ್ತು ನಾಗಾಈದಲಾಯಿ ಬಳಿ ಸೇತುವೆ ಪ್ರವಾಹದ ನೀರಿಗೆ ಕೊಚ್ಚಿಕೊಂಡು ಹೋಗಿದ್ದರಿಂದ ಚಿಂಚೋಳಿ ಬೀದರ್ ಮಧ್ಯೆ ಸಂಪರ್ಕ ಕಡಿತವಾಗಿದೆ.</p>.<p>ಚಿಂಚೋಳಿ ಪಟ್ಟಣದಲ್ಲಿಯೂ ಸೇತುವೆಯ ಕೆಳಭಾಗದ ಮಣ್ಣು ಕೊಚ್ಚಿಕೊಂಡು ಹೋಗಿದ್ದರಿಂದ ಡಾಂಬರ ರಸ್ತೆ ಕುಸಿದಿದೆ. ಇದರಿಂದ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಚಿಂಚೋಳಿ ಪಟ್ಟಣದಲ್ಲಿ ನೀರು ಹರಿಯಲು ಉಂಟಾಗಿದ್ದ ಅಡೆತಡೆಗಳನ್ನು ಪುರಸಭೆ ಮುಖ್ಯಾಧಿಕಾರಿ ಅಭಯಕುಮಾರ ಎದುರು ನಿಂತು ಜೆಸಿಬಿಯಿಂದ ತೆರವುಗೊಳಿಸಿದರು.</p>.<p>ತಹಶೀಲ್ದಾರ ಅರುಣಕುಮಾರ ಕುಲಕರ್ಣಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದರು.</p>.<p>ಕಾಳಗಿ ನೀಲಕಂಠ ಕಾಳೇಶ್ವರ ದೇವಸ್ಥಾನಕ್ಕೆ ನೀನು ನುಗ್ಗಿದೆ. ಅಧಿಕ ಅಮಾವಾಸ್ಯೆ ನಿಮಿತ್ತ ದರ್ಶನ ಪಡೆಯಲು ಆಗಮಿಸಿದ ಭಕ್ತರು ಪರದಾಡುವಂತಾಯಿತು. ಕಾಳಗಿ - ಕೊಡದೂರ ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ನೀರಿನ ಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.</p>.<div style="text-align:center"><figcaption>ಕಾಳಗಿ ನೀಲಕಂಠ ಕಾಳೇಶ್ವರ ದೇವಸ್ಥಾನಕ್ಕೆ ನೀನು ನುಗ್ಗಿದೆ.</figcaption></div>.<div style="text-align:center"><figcaption><em><strong>ಅಧಿಕ ಅಮಾವಾಸ್ಯೆ ನಿಮಿತ್ತ ದರ್ಶನ ಪಡೆಯಲು ಆಗಮಿಸಿದ ಭಕ್ತರು ಪರದಾಡುವಂತಾಯಿತು.</strong></em></figcaption></div>.<div style="text-align:center"><figcaption><em><strong>ಕಾಳಗಿ - ಕೊಡದೂರ ಸಂಪರ್ಕ ಸೇತುವೆ ಮುಳುಗಡೆಯಾಗಿದೆ.</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>