‘₹ 15 ಇದ್ದ ಪಹಣಿಯನ್ನು ₹ 5ಕ್ಕೆ ಮಾತ್ರ ನೀಡುವ ವ್ಯವಸ್ಥೆ ಮಾಡಬೇಕು. ₹ 2,000 ಮಾಸಾಶನ ಕೊಡಬೇಕು. ನಗರದಲ್ಲಿಕೃಷಿ ವಿಜ್ಞಾನ ಕೇಂದ್ರ ಇರುವುದರಿಂದ ಪ್ರತಿವರ್ಷ ಕೃಷಿ ಮೇಳ ಏರ್ಪಡಿಸಬೇಕು. ರೋಗ, ಕೀಟಬಾಧೆ ಮುಂತಾದ ಕಾರಣಗಳಿಂದ ಹಾಳಾದ ಬೆಳೆ ಸಮೀಕ್ಷೆ ಮಾಡಿ, ನಷ್ಟ ಆಗಿರುವ ರೈತರಿಗೆ ಪರಿಹಾರ ನೀಡಬೇಕು. ಪ್ರತಿದಿನ ಒಂದಲ್ಲ ಇಂದು ಕಡೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಕೂಡಲೇ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.