ಕಮಲಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯಾಗಿದ್ದ ಶೈಲಜಾ ರಜೆ ಇದ್ದುದರಿಂದ ಬೆಳಿಗ್ಗೆ ಕಳೆ ಕೀಳಲು ತಂದೆ ಶರಣಪ್ಪ ಜೊತೆ ಹೊಲಕ್ಕೆ ತೆರಳಿದ್ದಳು. ಮಧ್ಯಾಹ್ನ ಮಳೆಯಾಗುತ್ತಿರುವುದರಿಂದ ಗಿಡದ ಕೆಳಗೆ ಆಸರೆ ಪಡೆದಿದ್ದಳು. ಆಗಲೇ ಸಿಡಿಲು ಎರಗಿದೆ. ಶೈಲಜಾ ಸ್ಥಳದಲ್ಲೇ ಮೃತಪಟ್ಟಿದ್ದು, ತಂದೆ ಶರಣಪ್ಪ ಅವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.