ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಸಿಡಿಲು ಬಡಿದು ಬಾಲಕಿ ಸಾವು

Last Updated 31 ಜುಲೈ 2022, 13:55 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯ ಕಮಲಾ‍ಪುರ ತಾಲ್ಲೂಕಿನ ಮಳಸಾಪುರ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ಶೈಲಜಾ ಶರಣಪ್ಪ ಜಮಾದಾರ (17) ಎಂಬ ಬಾಲಕಿ ಮೃತಪಟ್ಟಿದ್ದಾಳೆ.

ಕಮಲಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯಾಗಿದ್ದ ಶೈಲಜಾ ರಜೆ ಇದ್ದುದರಿಂದ ಬೆಳಿಗ್ಗೆ ಕಳೆ ಕೀಳಲು ತಂದೆ ಶರಣಪ್ಪ ಜೊತೆ ಹೊಲಕ್ಕೆ ತೆರಳಿದ್ದಳು. ಮಧ್ಯಾಹ್ನ ಮಳೆಯಾಗುತ್ತಿರುವುದರಿಂದ ಗಿಡದ ಕೆಳಗೆ ಆಸರೆ ಪಡೆದಿದ್ದಳು. ಆಗಲೇ ಸಿಡಿಲು ಎರಗಿದೆ. ಶೈಲಜಾ ಸ್ಥಳದಲ್ಲೇ ಮೃತಪಟ್ಟಿದ್ದು, ತಂದೆ ಶರಣಪ್ಪ ಅವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಹಲವೆಡೆ ಹಾಗೂ ಕೊಪ್ಪಳ ನಗರದಲ್ಲಿ ಕೆಲ ಹೊತ್ತು ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT