<p>ಕಲಬುರಗಿ: ಟಿ.ವಿ ಮಾಧ್ಯಮ ಇಲ್ಲದ ಸಮಯದಲ್ಲಿ ನಾಟಕಗಳು ಜನರ ಮನರಂಜನೆಯ ಮಾಧ್ಯಮವಾಗಿದ್ದವು. ಜನರು ತಪ್ಪದೇ ನಾಟಕಗಳನ್ನು ನೋಡಿ ಪ್ರೋತ್ಸಾಹ ಕೊಡಬೇಕು. ಆ ಮೂಲಕ ನಾಡಿಕ ಸಂಸ್ಕೃತಿ ಉಳಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಂದ್ರಪ್ಪ ಪೊಲೀಸ್ ಪಾಟೀಲ ಹೇಳಿದರು.</p>.<p>ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಗ್ರಾಮದ ಇಲ್ಲಿನ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಿದ್ಧರಾಮೇಶ್ವರ ಬುಡ್ಗ ಜಂಗಮ ಜನಪದ ನಾಟ್ಯ ಕಲಾ ಸಂಘದ ವತಿಯಿಂದ ಈಚೆಗೆ ಆಯೋಜಿಸಿದ್ದ ‘ಹೇಮರೆಡ್ಡಿ ಮಲ್ಲಮ್ಮ’ ನಾಟಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>’ಐತಿಹಾಸಿಕ ನಾಟಕಗಳು ಇತ್ತೀಚೆಗೆ ಮರೆಯಾಗುತ್ತಿವೆ. ಇಂದಿಗೂ ವೃತ್ತಿಪರ ಕಲಾವಿದರು ಐತಿಹಾಸಿ ಹಾಗೂ ಸಾಮಾಜಿಕ ನಾಟಕಗಳನ್ನು ಪ್ರದರ್ಶಿಸುತ್ತಿದ್ದಾರೆ. ಹಿಂದಿನ ನಾಟಕಗಳ ವೈಭವವನ್ನು ನೆನಪು ಮಾಡಿಕೊಂಡರೆ ಖುಷಿಯಾಗುತ್ತದೆ’ ಎಂದರು.</p>.<p>ನಿಂಗಣ್ಣ ಗೌಡ ಪೊಲೀಸ್ ಪಾಟೀಲ, ತಿಪ್ಪಣ್ಣ ಗೌನಹಳ್ಳಿ, ಹಣಮಂತರಾಯ ಅಪ್ಪಾಜಿ, ಮಡಿವಾಳಪ್ಪಗೌಡ ಬಿರಾದಾರ, ಮಂಜುನಾಥ ಅಪ್ಪಾಜಿ ಹಾಗೂ ಕಲಾವಿದರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಟಿ.ವಿ ಮಾಧ್ಯಮ ಇಲ್ಲದ ಸಮಯದಲ್ಲಿ ನಾಟಕಗಳು ಜನರ ಮನರಂಜನೆಯ ಮಾಧ್ಯಮವಾಗಿದ್ದವು. ಜನರು ತಪ್ಪದೇ ನಾಟಕಗಳನ್ನು ನೋಡಿ ಪ್ರೋತ್ಸಾಹ ಕೊಡಬೇಕು. ಆ ಮೂಲಕ ನಾಡಿಕ ಸಂಸ್ಕೃತಿ ಉಳಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಂದ್ರಪ್ಪ ಪೊಲೀಸ್ ಪಾಟೀಲ ಹೇಳಿದರು.</p>.<p>ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಗ್ರಾಮದ ಇಲ್ಲಿನ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಿದ್ಧರಾಮೇಶ್ವರ ಬುಡ್ಗ ಜಂಗಮ ಜನಪದ ನಾಟ್ಯ ಕಲಾ ಸಂಘದ ವತಿಯಿಂದ ಈಚೆಗೆ ಆಯೋಜಿಸಿದ್ದ ‘ಹೇಮರೆಡ್ಡಿ ಮಲ್ಲಮ್ಮ’ ನಾಟಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>’ಐತಿಹಾಸಿಕ ನಾಟಕಗಳು ಇತ್ತೀಚೆಗೆ ಮರೆಯಾಗುತ್ತಿವೆ. ಇಂದಿಗೂ ವೃತ್ತಿಪರ ಕಲಾವಿದರು ಐತಿಹಾಸಿ ಹಾಗೂ ಸಾಮಾಜಿಕ ನಾಟಕಗಳನ್ನು ಪ್ರದರ್ಶಿಸುತ್ತಿದ್ದಾರೆ. ಹಿಂದಿನ ನಾಟಕಗಳ ವೈಭವವನ್ನು ನೆನಪು ಮಾಡಿಕೊಂಡರೆ ಖುಷಿಯಾಗುತ್ತದೆ’ ಎಂದರು.</p>.<p>ನಿಂಗಣ್ಣ ಗೌಡ ಪೊಲೀಸ್ ಪಾಟೀಲ, ತಿಪ್ಪಣ್ಣ ಗೌನಹಳ್ಳಿ, ಹಣಮಂತರಾಯ ಅಪ್ಪಾಜಿ, ಮಡಿವಾಳಪ್ಪಗೌಡ ಬಿರಾದಾರ, ಮಂಜುನಾಥ ಅಪ್ಪಾಜಿ ಹಾಗೂ ಕಲಾವಿದರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>