ರಾಜ್ಯದಲ್ಲಿ ಉಗ್ರರ ದಾಳಿ ನಡೆಯುವ ಸಂಭವ ಇದೆ ಎಂಬ ಗುಪ್ತಚರ ಇಲಾಖೆ ನೀಡಿದ ಎಚ್ಚರಿಕೆ ಹಿನ್ನೆಲೆಯಲ್ಲಿ ಎಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದೆ. ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ದೊಡ್ಡ ದೇವಸ್ಥಾನಗಳು, ದರ್ಗಾ, ಚರ್ಚ್ ಮತ್ತಿತರ ಸೂಕ್ಷ್ಮ ಪ್ರದೇಶಗಳಲ್ಲಿಯೂ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ, ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಡಿಸಿಪಿ ಕಿಶೋರಬಾಬು ‘ಪ್ರಜಾವಾಣಿ’ಗೆ ತಿಳಿಸಿದರು.