ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರಘುನಾಥ್ ರಾವ್ ಮಲ್ಕಾಪುರೆ, ಭಾರತಿ ಶೆಟ್ಟಿ, ಡಾ. ತಳವಾರ ಸಾಬಣ್ಣ, ಲೆಹರ್ ಸಿಂಗ್, ಪ್ರತಾಪ ಸಿಂಹ ನಾಯಕ, ತುಳಸಿ ಮುನಿರಾಜುಗೌಡ ಅವರು ಕಲಬುರಗಿ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ತಾವು ವಾಸವಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು. ಅವರು ವಾಸವಿರುವ ಬಗ್ಗೆ ದಾಖಲೆ ಪರಿಶೀಲಿಸಿದ್ದ ಚುನಾವಣಾಧಿಕಾರಿ ಡಾ. ತಳವಾರ ಸಾಬಣ್ಣ ಹಾಗೂ ಪ್ರತಾಪ ಸಿಂಹ ನಾಯಕ್ ಅವರ ಅರ್ಜಿಗಳನ್ನು ತಿರಸ್ಕಿರಿ, ಉಳಿದ ಐವರ ಹೆಸರುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದರು.