<p><strong>ಜೇವರ್ಗಿ:</strong> ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರೂ ಹಿಂದೂ ಸಮಾಜದವರು ಸೇರಿಕೊಂಡು ದರ್ಗಾ ನಿರ್ಮಿಸುವ ಮೂಲಕ ಕೋಮು ಸಾಮರಸ್ಯದ ಸಂದೇಶ ಸಾರಿದ್ದಾರೆ. </p>.<p>ಕಲ್ಲಹಂಗರಗಾದಲ್ಲಿ ಹಿಂದೂಗಳು ಮಾತ್ರ ವಾಸ ಮಾಡುತ್ತಿದ್ದಾರೆ. ಇಲ್ಲಿ ಶಾ ಹುಸೇನಿ ಬಾಷಾ ಎಂಬ ಮುಸ್ಲಿಂ ಮೌಲ್ವಿಯೊಬ್ಬರ ಸಮಾಧಿ ಇದೆ. ಆ ಸಮಾಧಿಯನ್ನು ಹಿಂದೂಗಳೇ ಪೂಜೆ ಮಾಡುತ್ತಿದ್ದಾರೆ.</p>.<p>ಜೇವರ್ಗಿ ಪಟ್ಟಣದಿಂದ 15 ಕಿ.ಮೀ ದೂರದಲ್ಲಿರುವ ಕಲ್ಲಹಂಗರಗಾ ಗ್ರಾಮದಲ್ಲಿ 5 ಸಾವಿರ ಜನಸಂಖ್ಯೆ ಇದ್ದರೂ, ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ.</p>.<p>ಶತಮಾನಗಳಷ್ಟು ಹಳೆಯದಾದ ಶಿಥಿಲಗೊಂಡ 6×8 ಅಡಿಯ ಸ್ಥಳದ ಚಿಕ್ಕ ಕೊಣೆಯೊಂದರಲ್ಲಿ ಶಾ ಹುಸೇನಿ ಬಾಷಾ ದರ್ಗಾ ಇತ್ತು. ಗ್ರಾಮದ ಯುವಕರೆಲ್ಲ ಸೇರಿಕೊಂಡು ದರ್ಗಾ ನಿರ್ಮಾಣಕ್ಕೆ ಸಂಕಲ್ಪ ಮಾಡಿದರು. ಗ್ರಾಮದ ಜನರಿಂದ ₹4 ಲಕ್ಷ ದೇಣಿಗೆ ಸಂಗ್ರಹಿಸಿದ್ದಾರೆ. ಕೆಕೆಆರ್ಡಿಬಿ ಅಧ್ಯಕ್ಷರೂ ಆಗಿರುವ ಶಾಸಕ ಡಾ.ಅಜಯಸಿಂಗ್ ಅವರು ದರ್ಗಾ ನಿರ್ಮಾಣಕ್ಕೆ ₹5 ಲಕ್ಷ ಅನುದಾನ ನೀಡಿದ್ದಾರೆ. ಒಟ್ಟು ₹10 ಲಕ್ಷ ಅಂದಾಜು ಮೊತ್ತದಲ್ಲಿ 20×12 ಅಡಿಯ ನಿವೇಶನದಲ್ಲಿ ದರ್ಗಾ ನಿರ್ಮಾಣಗೊಂಡಿದೆ. ಪಕ್ಕದಲ್ಲಿ ಒಂದು ಕೋಣೆಯನ್ನೂ ನಿರ್ಮಿಸಲಾಗಿದೆ.</p>.<p>ಕಲ್ಲಹಂಗರಗಾ ಗ್ರಾಮದಲ್ಲಿ ಶಾ ಹುಸೇನಿ ಬಾಷಾ ಉರುಸ್ ಅನ್ನು ಹಿಂದೂಗಳೇ ಆಚರಿಸುತ್ತಾರೆ. ಪ್ರತಿ ವರ್ಷ ಮೊಹರಂ ಈ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗುತ್ತದೆ.</p>.<h2>ದರ್ಗಾ ಉದ್ಘಾಟನೆ: </h2><p>ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ನಿರ್ಮಿಸಿರುವ ನೂತನ ದರ್ಗಾವನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಶುಕ್ರವಾರ ಉದ್ಘಾಟಿಸಿದರು. ನೆಲೋಗಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. </p>.<p>ಬಿಜೆಪಿ ಮುಖಂಡ ಶಿವರಾಜ ಪಾಟೀಲ ರದ್ದೇವಾಡಗಿ, ರಾಜಶೇಖರ ಸಾಹು ಸೀರಿ, ಜಯಪ್ರಕಾಶ್ ಪಾಟೀಲ ನರಿಬೋಳ, ವೀರಶೈವ ಸಮಾಜದ ಅಧ್ಯಕ್ಷ ಸಿದ್ದು ಸಾಹು ಅಂಗಡಿ ಹಾಗೂ ಗ್ರಾಮಸ್ಥರು ಹಾಜರಿದ್ದರು. ದರ್ಗಾಕ್ಕೆ ಬಂದ ಭಕ್ತರಿಗಾಗಿ ಅನ್ನಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.</p>.<div><blockquote>ಶಾ ಹುಸೇನಿ ಬಾಷಾ ಸಂತ ಈ ಗ್ರಾಮದಲ್ಲೇ ಹಿಂದೆ ನೆಲೆಸಿದ್ದರು. ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರೂ ಉರುಸ್ ಹಾಗೂ ಮೊಹರಂ ಅನ್ನು ಹಿಂದೂಗಳೇ ಸಂಭ್ರಮದಿಂದ ಆಚರಿಸುತ್ತಾರೆ </blockquote><span class="attribution">– ದೊಡ್ಡಪ್ಪಗೌಡ ಪಾಟೀಲ ಕಲ್ಲಹಂಗರಗಾ ದರ್ಗಾ ಕಮಿಟಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ:</strong> ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರೂ ಹಿಂದೂ ಸಮಾಜದವರು ಸೇರಿಕೊಂಡು ದರ್ಗಾ ನಿರ್ಮಿಸುವ ಮೂಲಕ ಕೋಮು ಸಾಮರಸ್ಯದ ಸಂದೇಶ ಸಾರಿದ್ದಾರೆ. </p>.<p>ಕಲ್ಲಹಂಗರಗಾದಲ್ಲಿ ಹಿಂದೂಗಳು ಮಾತ್ರ ವಾಸ ಮಾಡುತ್ತಿದ್ದಾರೆ. ಇಲ್ಲಿ ಶಾ ಹುಸೇನಿ ಬಾಷಾ ಎಂಬ ಮುಸ್ಲಿಂ ಮೌಲ್ವಿಯೊಬ್ಬರ ಸಮಾಧಿ ಇದೆ. ಆ ಸಮಾಧಿಯನ್ನು ಹಿಂದೂಗಳೇ ಪೂಜೆ ಮಾಡುತ್ತಿದ್ದಾರೆ.</p>.<p>ಜೇವರ್ಗಿ ಪಟ್ಟಣದಿಂದ 15 ಕಿ.ಮೀ ದೂರದಲ್ಲಿರುವ ಕಲ್ಲಹಂಗರಗಾ ಗ್ರಾಮದಲ್ಲಿ 5 ಸಾವಿರ ಜನಸಂಖ್ಯೆ ಇದ್ದರೂ, ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ.</p>.<p>ಶತಮಾನಗಳಷ್ಟು ಹಳೆಯದಾದ ಶಿಥಿಲಗೊಂಡ 6×8 ಅಡಿಯ ಸ್ಥಳದ ಚಿಕ್ಕ ಕೊಣೆಯೊಂದರಲ್ಲಿ ಶಾ ಹುಸೇನಿ ಬಾಷಾ ದರ್ಗಾ ಇತ್ತು. ಗ್ರಾಮದ ಯುವಕರೆಲ್ಲ ಸೇರಿಕೊಂಡು ದರ್ಗಾ ನಿರ್ಮಾಣಕ್ಕೆ ಸಂಕಲ್ಪ ಮಾಡಿದರು. ಗ್ರಾಮದ ಜನರಿಂದ ₹4 ಲಕ್ಷ ದೇಣಿಗೆ ಸಂಗ್ರಹಿಸಿದ್ದಾರೆ. ಕೆಕೆಆರ್ಡಿಬಿ ಅಧ್ಯಕ್ಷರೂ ಆಗಿರುವ ಶಾಸಕ ಡಾ.ಅಜಯಸಿಂಗ್ ಅವರು ದರ್ಗಾ ನಿರ್ಮಾಣಕ್ಕೆ ₹5 ಲಕ್ಷ ಅನುದಾನ ನೀಡಿದ್ದಾರೆ. ಒಟ್ಟು ₹10 ಲಕ್ಷ ಅಂದಾಜು ಮೊತ್ತದಲ್ಲಿ 20×12 ಅಡಿಯ ನಿವೇಶನದಲ್ಲಿ ದರ್ಗಾ ನಿರ್ಮಾಣಗೊಂಡಿದೆ. ಪಕ್ಕದಲ್ಲಿ ಒಂದು ಕೋಣೆಯನ್ನೂ ನಿರ್ಮಿಸಲಾಗಿದೆ.</p>.<p>ಕಲ್ಲಹಂಗರಗಾ ಗ್ರಾಮದಲ್ಲಿ ಶಾ ಹುಸೇನಿ ಬಾಷಾ ಉರುಸ್ ಅನ್ನು ಹಿಂದೂಗಳೇ ಆಚರಿಸುತ್ತಾರೆ. ಪ್ರತಿ ವರ್ಷ ಮೊಹರಂ ಈ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗುತ್ತದೆ.</p>.<h2>ದರ್ಗಾ ಉದ್ಘಾಟನೆ: </h2><p>ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ನಿರ್ಮಿಸಿರುವ ನೂತನ ದರ್ಗಾವನ್ನು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಶುಕ್ರವಾರ ಉದ್ಘಾಟಿಸಿದರು. ನೆಲೋಗಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. </p>.<p>ಬಿಜೆಪಿ ಮುಖಂಡ ಶಿವರಾಜ ಪಾಟೀಲ ರದ್ದೇವಾಡಗಿ, ರಾಜಶೇಖರ ಸಾಹು ಸೀರಿ, ಜಯಪ್ರಕಾಶ್ ಪಾಟೀಲ ನರಿಬೋಳ, ವೀರಶೈವ ಸಮಾಜದ ಅಧ್ಯಕ್ಷ ಸಿದ್ದು ಸಾಹು ಅಂಗಡಿ ಹಾಗೂ ಗ್ರಾಮಸ್ಥರು ಹಾಜರಿದ್ದರು. ದರ್ಗಾಕ್ಕೆ ಬಂದ ಭಕ್ತರಿಗಾಗಿ ಅನ್ನಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.</p>.<div><blockquote>ಶಾ ಹುಸೇನಿ ಬಾಷಾ ಸಂತ ಈ ಗ್ರಾಮದಲ್ಲೇ ಹಿಂದೆ ನೆಲೆಸಿದ್ದರು. ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರೂ ಉರುಸ್ ಹಾಗೂ ಮೊಹರಂ ಅನ್ನು ಹಿಂದೂಗಳೇ ಸಂಭ್ರಮದಿಂದ ಆಚರಿಸುತ್ತಾರೆ </blockquote><span class="attribution">– ದೊಡ್ಡಪ್ಪಗೌಡ ಪಾಟೀಲ ಕಲ್ಲಹಂಗರಗಾ ದರ್ಗಾ ಕಮಿಟಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>