ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಾಯ ಮಟ್ಟ ಮೀರಿದ ಭೀಮಾ ನದಿ: ಅಪಾಯದಲ್ಲಿ ಐತಿಹಾಸಿಕ ಬೌದ್ಧ ಸ್ತೂಪ

Last Updated 16 ಅಕ್ಟೋಬರ್ 2020, 5:11 IST
ಅಕ್ಷರ ಗಾತ್ರ

ಕಲಬುರ್ಗಿ: ಭೀಮೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಚಿತ್ತಾಪುರ ತಾಲ್ಲೂಕಿನ ಸನ್ನತಿ ಬಳಿ ಭೀಮಾ ನದಿಯ ದಡದಲ್ಲಿರುವ ಕನಗನಹಳ್ಳಿಯ ಐತಿಹಾಸಿಕ ಬೌದ್ಧ ಸ್ತೂಪ ಹಾಗೂ ಚಂದ್ರಲಾ ಪರಮೇಶ್ವರಿ ದೇವಾಲಯ ಸಂಪೂರ್ಣ ಜಲಾವೃತಗೊಂಡಿವೆ.

ಭೀಮಾ ಬ್ಯಾರೇಜ್‍ನ ಎಲ್ಲಾ ಗೇಟ್‍ಗಳ ಮೂಲಕ ನೀರು ಹೊರ ಬಿಡಲಾಗುತ್ತಿದ್ದು, ಪ್ರವಾಹ ಇನ್ನೂ ಉಕ್ಕೇರುತ್ತಲೇ ಇದೆ. ಕ್ರಿ.ಪೂ. 3ನೇ ಸತಮಾನಕ್ಕೆ ಸೇರಿದ ಮೌರ್ಯ ಸಾಮ್ರಾಜ್ಯದ ಸಾಮ್ರಾಟ್ ಅಶೋಕನ ಕಾಲದ ಬೌದ್ಧ ಚರಿತ್ರೆ ಸಾರುವ ಸಾವಿರಾರು ಬೌದ್ಧ ಶಿಲ್ಪಕಲೆಗಳು, ಬುದ್ಧ ವಿಹಾರ, ಬುದ್ಧನ ಮೂರ್ತಿಗಳು, ಪಾಲಿ ಭಾಷೆಯ ಶಿಲಾ ಶಾಸನ ಹೀಗೆ ಸಾವಿರಾರು ಬೌದ್ಧ ಕುರುಹುಗಳಿಗೆ ಪ್ರವಾಹದ ಬಿಸಿ ತಟ್ಟಿದೆ.

ಕೇಂದ್ರ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿರುವ ಈ ಬೌದ್ಧ ನೆಲೆ ಈಗ ಜಲಪ್ರವಾಹಕ್ಕೆ ಸಿಲುಕಿದೆ.

ಶುಕ್ರವಾರ ಬೆಳಿಗ್ಗೆ 8ರಿಂದ ಪ್ರವಾಹ ಗಂಭೀರ ಪರಿಸ್ಥಿತಿ ತಲುಪಿದೆ. ಏಕಾಏಕಿ ಪ್ರವಾಹ ಉಂಟಾಗಿ ಬೌದ್ಧ ಸ್ತೂಪ ತಾಣವೀಗ‌ನೀರಲ್ಲಿ ನಿಂತಿದೆ. ಸನ್ನತಿ ಗ್ರಾಮ ಮತ್ತು ಬೌದ್ಧ ಸ್ತೂಪ ಸ್ಥಳದ ಜತೆಗೆ ಶ್ರೀಚಂದ್ರಲಾ ಪರಮೇಶ್ವರಿ ದೇವಸ್ಥಾನ ಮುಳುಗಡೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT