ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಕೆಸಿಸಿಐಗೆ ವಿಜಯೇಂದ್ರ ಸಂಬಂಧಿ ಪ್ರಶಾಂತ ಅಧ್ಯಕ್ಷ

Last Updated 22 ಮಾರ್ಚ್ 2021, 19:31 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಸಿಸಿಐ)ಯ ಅಧ್ಯಕ್ಷರಾಗಿ ನಗರದ ಉದ್ಯಮಿ ಪ್ರಶಾಂತ ಮಾನಕರ ಗೆಲುವು ಸಾಧಿಸಿದ್ದಾರೆ. ಇವರು, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಭಾವ.

ಭಾನುವಾರ ನಗರದಲ್ಲಿ ಮತದಾನ ನಡೆದು, ತಡರಾತ್ರಿ ಫಲಿತಾಂಶ ಪ್ರಕಟವಾಯಿತು.

ಪ್ರಶಾಂತ (1,524 ಪಡೆದ ಮತ) ಅವರು ನಿಕಟಪೂರ್ವ ಅಧ್ಯಕ್ಷ ಅಮರನಾಥ ಸಿ. ಪಾಟೀಲ ಅವರನ್ನು 878 ಮತಗಳಿಂದ ಪರಾಭವಗೊಳಿಸಿದರು.

ಪ್ರಶಾಂತ ಅವರಬಣದ ಎಲ್ಲ 23 ಸ್ಪರ್ಧಿಗಳು ವಿಜೇತರಾಗಿದ್ದಾರೆ. ನೂತನ ಆಡಳಿತ ಮಂಡಳಿಯ ಅವಧಿ ಮೂರು ವರ್ಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT