ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊದಲು ನಮ್ಮ ಭಾಗವನ್ನು ಕೈಗಾರಿಕಾ ವಲಯ 1ರಲ್ಲಿ ಸೇರಿಸಲಾಗಿತ್ತು. ಇದರಿಂದ ಒಂದಷ್ಟು ಉತ್ತೇಜನಗಳು ಸಿಗುವ ಸಾಧ್ಯತೆ ಇತ್ತು. ಈಗ ವಲಯ 1ರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಜೊತೆಗೆ ಮುಂಬೈ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸೇರ್ಪಡೆ ಮಾಡುವ ಹುನ್ನಾರ ನಡೆದಿದ್ದು, ಇದರಿಂದ ಮೊದಲೇ ಕೈಗಾರಿಕೆಯಲ್ಲಿ ಹಿಂದುಳಿದ ಕಲಬುರ್ಗಿ ಕಂದಾಯ ವಿಭಾಗದ ಜಿಲ್ಲೆಗಳಲ್ಲಿನ ಕೈಗಾರಿಕಾ ಪ್ರಗತಿ ಕುಂಠಿತವಾಗಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.