ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಪತ್ರ ಬರೆದಿರುವ ಅವರು, ‘ಕೆಕೆಆರ್ಡಿಬಿ ಅನುದಾನದಲ್ಲಿ ಸುಟ್ಟ ಗಾಯಗಳ ವಾರ್ಡ್ ಹಾಗೂ ಪ್ಲಾಸ್ಟಿಕ್ ಸರ್ಜರಿ ವಿಭಾಗವನ್ನು ಆರಂಭಿಸುವುದಾಗಿ ಘೋಷಿಸಿದ್ದರು. ಬೆಂಕಿ ಅವಘಡಗಳು ನಡೆದ ಸಂದರ್ಭದಲ್ಲಿ ಬಡ ರೋಗಿಗಳು ಬೇರೆ ನಗರಗಳಿಗೆ ಹೋಗಬೇಕಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚವಾಗಲಿದೆ. ಇದನ್ನು ತಪ್ಪಿಸಲು ಜಿಮ್ಸ್ನಲ್ಲಿ ಈ ವಿಭಾಗಗಳನ್ನು ಆರಂಭಿಸಬೇಕು’ ಎಂದು ಮನವಿ ಮಾಡಿದ್ದಾರೆ.