ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಳಿ ದೇಶದ ಸಂಸ್ಕೃತಿಯ ಪ್ರತೀಕ: ಸಂಸದ ಡಾ. ಉಮೇಶ ಜಾಧವ್

Published 25 ಮಾರ್ಚ್ 2024, 15:31 IST
Last Updated 25 ಮಾರ್ಚ್ 2024, 15:31 IST
ಅಕ್ಷರ ಗಾತ್ರ

ಕಲಬುರಗಿ: ‘ಹೋಳಿ ಹಬ್ಬ ದೇಶದ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಸಂಸದ ಡಾ. ಉಮೇಶ ಜಾಧವ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡ ಹೋಳಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಪತ್ರಕರ್ತರೊಂದಿಗೆ ಹಬ್ಬ ಆಚರಿಸಿರುವುದು ಬಾಲ್ಯದ ದಿನಗಳನ್ನು ನೆನಪಿಸಿತು. ವಿವಿಧ ಬಗೆಯ ಬಣ್ಣಗಳನ್ನು ಒಗ್ಗೂಡಿಸುವಂತೆ ನಾವೆಲ್ಲರೂ ಒಂದು ಎಂಬುದನ್ನು ನಿರೂಪಿಸುತ್ತದೆ’ ಎಂದರು.

‘ಹಿಂದೂಗಳೆಲ್ಲರೂ ಸಂಭ್ರಮದಿಂದ ಆಚರಿಸುವ ಹೋಳಿ ಹಬ್ಬದ ದಿನದಂದೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಟ್ಟಿರುವುದು ಸರಿಯಲ್ಲ. ಇದು ಮುಂದಿನ ದಿನಗಳಲ್ಲಿ ಪುನರಾವರ್ತನೆ ಆಗಬಾರದು’ ಎಂದರು.

ಸಂಸದರ ಜೊತೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಾಬುರಾವ ಯಡ್ರಾಮಿ ಸೇರಿದಂತೆ ಪತ್ರಕರ್ತರು, ದೃಶ್ಯ ಮಾಧ್ಯಮದವರು, ಛಾಯಾಗ್ರಾಹಕರು ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT