ಇಲ್ಲಿನ ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಗೃಹರಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ಶಿಸ್ತಿಗೆ ಹೆಸರಾದ ಗೃಹರಕ್ಷಕ ದಳದ ನಿಷ್ಕಾಮ ಸೇವೆಯನ್ನು ಸ್ಮರಣಾರ್ಹ. ಭೀಮಾ ನದಿಯ ಪ್ರವಾಹ ಸಂದರ್ಭದಲ್ಲಿ, ಅತಿವೃಷ್ಟಿ ಹಾಗೂ ಅಗ್ನಿ ಅವಘಡಗಳ ಸಂದರ್ಭದಲ್ಲಿ ಜನರ ಜೀವ ಹಾಗೂ ಆಸ್ತಿ ರಕ್ಷಣೆ ಮಾಡಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಗೃಹ ರಕ್ಷಕರಿಗೆ ಅಭಿನಂದನೆ ಸಲ್ಲಿಸಬೇಕು’ ಎಂದರು.