ಅಫಜಲಪುರ: ‘ಲಾಕ್ಡೌನ್ನಿಂದಾಗಿ ಹೂಗಾರ ಸಮುದಾಯದ ಲಕ್ಷಾಂತರ ಜನರು ಕಾಯಕವಿಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಹೂಗಾರ ಸಮುದಾಯದವರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು’ ಎಂದು ಅಫಜಲಪುರ ತಾಲ್ಲೂಕು ಹೂಗಾರ ಸಮಾಜದ ಅಧ್ಯಕ್ಷ ಮಡಿವಾಳ ಹೂಗಾರ ಸೋಮವಾರ ಇಲ್ಲಿ ಆಗ್ರಹಿಸಿದರು.
ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದ ಅವರು, ‘ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ಶ್ರಮಿಕರಿಗೆ ವಿಶೇಷ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ಆದರೆ ಹೂಗಾರ ಸಮುದಾಯವನ್ನು ಕಡೆಗಣಿಸಿರುವುದನ್ನು ನಾವು ಖಂಡಿಸುತ್ತೇವೆ’ ಎಂದರು.
ತಾಲ್ಲೂಕು ಕಬ್ಬ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ ಹೂಗಾರ ಮಾತನಾಡಿ,‘ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಹೂಗಾರರು ಪ್ರತಿಯೊಂದು ಸಮಾಜಕ್ಕೂ ಬೇಕು. ಅವರ ಕೊಡುಗೆಯನ್ನು ಗಮನಿಸಿ ಸರ್ಕಾರ ಕೂಡಲೇ ವಿಶೇಷ ಆರ್ಥಿಕ ನೆರವು ಘೋಷಿಸಬೇಕು’ ಎಂದು ಆಗ್ರಹಿಸಿದರು.