<p><strong>ಅಫಜಲಪುರ:</strong> ‘ಲಾಕ್ಡೌನ್ನಿಂದಾಗಿ ಹೂಗಾರ ಸಮುದಾಯದ ಲಕ್ಷಾಂತರ ಜನರು ಕಾಯಕವಿಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಹೂಗಾರ ಸಮುದಾಯದವರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು’ ಎಂದು ಅಫಜಲಪುರ ತಾಲ್ಲೂಕು ಹೂಗಾರ ಸಮಾಜದ ಅಧ್ಯಕ್ಷ ಮಡಿವಾಳ ಹೂಗಾರ ಸೋಮವಾರ ಇಲ್ಲಿ ಆಗ್ರಹಿಸಿದರು.</p>.<p>ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದ ಅವರು, ‘ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ಶ್ರಮಿಕರಿಗೆ ವಿಶೇಷ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ಆದರೆ ಹೂಗಾರ ಸಮುದಾಯವನ್ನು ಕಡೆಗಣಿಸಿರುವುದನ್ನು ನಾವು ಖಂಡಿಸುತ್ತೇವೆ’ ಎಂದರು.</p>.<p>ತಾಲ್ಲೂಕು ಕಬ್ಬ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ ಹೂಗಾರ ಮಾತನಾಡಿ,‘ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಹೂಗಾರರು ಪ್ರತಿಯೊಂದು ಸಮಾಜಕ್ಕೂ ಬೇಕು. ಅವರ ಕೊಡುಗೆಯನ್ನು ಗಮನಿಸಿ ಸರ್ಕಾರ ಕೂಡಲೇ ವಿಶೇಷ ಆರ್ಥಿಕ ನೆರವು ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ರೇವಣಸಿದ್ಧ ಹೂಗಾರ, ಬಸವರಾಜ ಹೂಗಾರ, ಶರಣಪ್ಪ ಅವಟೆ, ಸಿದ್ದು ಹೂಗಾರ, ಶ್ರೀಶೈಲ ಹೂಗಾರ, ವಿಕಾಸ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ‘ಲಾಕ್ಡೌನ್ನಿಂದಾಗಿ ಹೂಗಾರ ಸಮುದಾಯದ ಲಕ್ಷಾಂತರ ಜನರು ಕಾಯಕವಿಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಹೂಗಾರ ಸಮುದಾಯದವರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು’ ಎಂದು ಅಫಜಲಪುರ ತಾಲ್ಲೂಕು ಹೂಗಾರ ಸಮಾಜದ ಅಧ್ಯಕ್ಷ ಮಡಿವಾಳ ಹೂಗಾರ ಸೋಮವಾರ ಇಲ್ಲಿ ಆಗ್ರಹಿಸಿದರು.</p>.<p>ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದ ಅವರು, ‘ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ಶ್ರಮಿಕರಿಗೆ ವಿಶೇಷ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ಆದರೆ ಹೂಗಾರ ಸಮುದಾಯವನ್ನು ಕಡೆಗಣಿಸಿರುವುದನ್ನು ನಾವು ಖಂಡಿಸುತ್ತೇವೆ’ ಎಂದರು.</p>.<p>ತಾಲ್ಲೂಕು ಕಬ್ಬ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ ಹೂಗಾರ ಮಾತನಾಡಿ,‘ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಹೂಗಾರರು ಪ್ರತಿಯೊಂದು ಸಮಾಜಕ್ಕೂ ಬೇಕು. ಅವರ ಕೊಡುಗೆಯನ್ನು ಗಮನಿಸಿ ಸರ್ಕಾರ ಕೂಡಲೇ ವಿಶೇಷ ಆರ್ಥಿಕ ನೆರವು ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ರೇವಣಸಿದ್ಧ ಹೂಗಾರ, ಬಸವರಾಜ ಹೂಗಾರ, ಶರಣಪ್ಪ ಅವಟೆ, ಸಿದ್ದು ಹೂಗಾರ, ಶ್ರೀಶೈಲ ಹೂಗಾರ, ವಿಕಾಸ ಹೂಗಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>