ಕಲಬುರ್ಗಿ: ನಗರದ ಟ್ಯಾಂಕ್ ಬಂಡ್ ಬಡಾವಣೆಯಲ್ಲಿ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾರೆ.
ಜ್ಯೋತಿ ಶಿಂಧೆ (35) ಮೃತಪಟ್ಟವರು. ಆರೋಪಿ ಪತಿ ವಿಶ್ವನಾಥ್ ಶಿಂಧೆ ಪೊಲೀಸರಿಗೆ ಶರಣಾಗಿದ್ದಾರೆ.
ಜ್ಯೋತಿ ಅವರು ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಕೆಲಸ ಮಾಡುತ್ತಿದ್ದರು. ಶೀಲ ಶಂಕಿಸಿ ಬ್ಯಾಟ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.