ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಂತರವಾಗಿ ಒತ್ತಡ ಹಾಕಿದರೆ ಮಾತ್ರ ಈ ಭಾಗದ ಜನತೆಯ ಬೇಡಿಕೆಗಳು ಈಡೇರುತ್ತವೆ. ಆಡಳಿತ ಪಕ್ಷದವರು, ವಿರೋಧ ಪಕ್ಷದವರು ಈ ಬಗ್ಗೆ ಪ್ರಶ್ನಿಸದೇ ತೆಪ್ಪಗೆ ಕುಳಿತಿರುವುದಾದರೂ ಏಕೆ?ರೈಲ್ವೆ ವಲಯ ಸ್ಥಾಪನೆಯಲ್ಲೂ ಕಲಬುರ್ಗಿ ಭಾಗಕ್ಕೆ ಅನ್ಯಾಯವಾಗುತ್ತಿದೆ. ಇದನ್ನು ಎಷ್ಟು ದಿನ ಸಹಿಸಿಕೊಳ್ಳಬೇಕು ಎಂದು ಪ್ರಶ್ನಿಸಿದರು.