ಶೇಖ್ ಅಹ್ಮದ್ ಮೀನು ಹಿಡಿಯಲೆಂದು ಸೋಮವಾರ ಚಿತ್ತಾಪುರದಿಂದ ಮುಡಬೂಳ ಹತ್ತಿರದ ಕಾಗಿಣಾ ನದಿಗೆ ತೆರಳಿದ್ದಾರೆ. ಆ ಸಮಯದಲ್ಲಿ ನದಿಗೆ ಜಾರಿ ಬಿದ್ದು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಸಾಯಂಕಾಲ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಚಿತ್ತಾಪುರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಗೆ ಸಿದ್ಧವಾಗುತ್ತಿದ್ದಂತೆ ಸೂರ್ಯಾಸ್ತವಾಗಿ ಕಾರ್ಯಾಚರಣೆ ನಡೆಸಲಾಗಲಿಲ್ಲ.