ಕಲಬುರಗಿ ವಿಮಾನ ನಿಲ್ದಾಣದಲ್ಲಿ ಹಾರಾಟ ನಿರತ ತರಬೇತಿಯ ಲಘು ವಿಮಾನ
ಪ್ರಯಾಣಿಕರ ಸುರಕ್ಷತೆ ಹಾಗೂ ವಿಮಾನ ನಿಲ್ದಾಣದ ಬೆಳವಣಿಗೆಯ ದೃಷ್ಟಿಯಿಂದ ನಿಲ್ದಾಣದ ವ್ಯಾಪ್ತಿಯಲ್ಲಿ ಎಎಐ ನಿಯಮಗಳ ಪಾಲನೆ ಮುಖ್ಯವಾಗುತ್ತದೆ
-ಚಿಲಕಾ ಮಹೇಶ ವಿಮಾನ ನಿಲ್ದಾಣದ ನಿರ್ದೇಶಕ
ಬೆಟ್ಟದ ಮೇಲಿನ ಮರಗಳ ತೆರವು ಬಗ್ಗೆ ಯಾವುದೇ ದೂರು ಪತ್ರ ಬಂದಿಲ್ಲ. ನಿಲ್ದಾಣದ ಸುತ್ತ ಪ್ರಾಣಿಗಳ ಓಡಾಟ ಹೆಚ್ಚಾದ ಬಗ್ಗೆ ದೂರು ಬಂದಿತ್ತು. ತಕ್ಷಣವೇ ಅವುಗಳನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸಲಾಗಿತ್ತು
-ಸುಮಿತ್ ಪಾಟೀಲ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಲಬುರಗಿ
ಜಂಟಿ ಪರಿಶೀಲನೆ
ಜಿಲ್ಲಾಧಿಕಾರಿ ‘ಹೊಸ ಬಡಾವಣೆಗಳನ್ನು ಅಭಿವೃದ್ಧಿ ಮಾಡುವವರಿಗೆ ತಹಶೀಲ್ದಾರ್ ಮೂಲಕ ಮತ್ತೊಮ್ಮೆ ನೋಟಿಸ್ ನೀಡಲಾಗಿದೆ. ವಿಮಾನ ನಿಲ್ದಾಣದ ನಿರ್ದೇಶಕರು ಹಾಗೂ ತಹಶೀಲ್ದಾರ್ ನೇತೃತ್ವದಲ್ಲಿ ಜಂಟಿ ಪರಿಶೀಲನೆ ನಡೆಸಿ ವರದಿಯನ್ನು ತರಿಸಿಕೊಳ್ಳಲಾಗುವುದು. ವರದಿಯ ಪ್ರಕರ ಸಂಬಂಧಪಟ್ಟವರಿಗೆ ಸೂಚನೆ ಕೊಡುತ್ತೇವೆ’ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.