ಕಲಬುರ್ಗಿ: ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ಇದ್ದರೂ ಅಕ್ರಮವಾಗಿ ಹೈದರಾಬಾದ್ಗೆ ಆಮ್ಲಜನಕ ಸಿಲಿಂಡರ್ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಆಮ್ಲಜನಕ ಉತ್ಪಾದನಾ ಸಂಸ್ಥೆಯ ಮಾಲೀಕ, ವಾಹನದ ಚಾಲಕ, ಹೆಲ್ಪರ್ ಹಾಗೂ ವೈದ್ಯರ ವಿರುದ್ಧ ಕಲಬುರ್ಗಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಾಲಕ, ಹೆಲ್ಪರ್ನನ್ನು ವಶಕ್ಕೆ ಪಡೆದಿದ್ದಾರೆ.