ಪರೀಕ್ಷೆ ಕೇಂದ್ರದೊಳಗಿದ್ದ ಕೆಲವು ಅಭ್ಯರ್ಥಿಗಳಿಗೆ ರುದ್ರಗೌಡ ಬ್ಲೂಟೂತ್ ಮೂಲಕ ಉತ್ತರ ರವಾನಿಸಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ರುದ್ರಗೌಡ ಅವರ ಅಣ್ಣ ಮಹಾಂತೇಶ, ಅಭ್ಯರ್ಥಿಗಳಾದ ವಿಶಾಲ್ ಶಿರೂರ, ಹಯ್ಯಾಳಿ ದೇಸಾಯಿ, ಮೊಬೈಲ್ ಕೊಟ್ಟು ಸಹಕರಿಸಿದ ಶರಣಬಸಪ್ಪ, ಕಾನ್ ಸ್ಟೆಬಲ್ ರುದ್ರಗೌ ಪಾಟೀಲ ಎನ್ನುವವರನ್ನು ಬಂಧಿಸಲಾಗಿದೆ. ಇವರೆಲ್ಲ ಬ್ಲೂಟೂತ್ ಬಳಸಿ ಅಕ್ರಮ ಎಸಗಿದ ಆರೋಪದಡಿ ಮಾತ್ರ ಬಂಧಿಸಿದರು. ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರುದ್ರಗೌಡ ಡಿ. ಪಾಟೀಲ ಈಗ ಸಿಕ್ಕಿಬಿದ್ದಿದ್ದಾರೆ.