‘ಭೀಮಾ ನದಿಯಲ್ಲಿ ಹಗಲು– ರಾತ್ರಿ ಮರಳು ಗಣಿಗಾರಿಕೆ ನಡೆದಿದೆ. ಸರ್ಕಾರವೇ ಜಾರಿ ಮಾಡಿದ ಮರಳು ನೀತಿಗೆ ವಿರುದ್ಧವಾಗಿ ಅಧಿಕಾರಿಗಳು ಪರವಾನಗಿ ನೀಡುತ್ತಿದ್ದಾರೆ. ಈ ಭಾಗದ ಶಾಸಕರು, ಸಂಸದರು, ಜಿಲ್ಲಾಮಟ್ಟದ ಅಧಿಕಾರಿಗಳು ಎಲ್ಲರಿಗೂ ಈ ವಿಷಯ ಗೊತ್ತಿದೆ. ಆದರೆ, ಯಾರೊಬ್ಬರೂ ಅಕ್ರಮ ತಡೆಯುವ ಮಾತನಾಡುತ್ತಿಲ್ಲ. ಇವರ ನಿರ್ಲಕ್ಷ್ಯದ ಕಾರಣ ಜಿಲ್ಲೆಯಿಂದ ಅಪಾರ ಪ್ರಮಾಣದ ಮರಳು ಸಾಗಣೆಯಾಗುತ್ತಿದೆ. ಹುಲ್ಲೂರು ಗ್ರಾಮದಲ್ಲಿ 300ಕ್ಕೂ ಹೆಚ್ಚು ಮಹಿಳೆಯರು ಭಾನುವಾರ ರಾತ್ರಿ ಮರಳು ತುಂಬಿದ ಲಾರಿಗಳನ್ನು ತಡೆದು ನಿಲ್ಲಿಸಿದ್ದೇ ಇದಕ್ಕೆ ಸಾಕ್ಷಿ’ ಎಂದು ಅವರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.