ಕಲಬುರ್ಗಿ: ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಸಮೃದ್ಧಿ ಯೋಜನೆ ಅಡಿ ಭಂಕೂರ, ಮಾಲಗತ್ತಿ ಹಾಗೂ ಕಾಳನೂರು ಗ್ರಾಮಗಳಲ್ಲಿ ಬೀದಿ ವ್ಯಾಪಾರಿಗಳಿಗೆ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಅವರು ₹ 10 ಸಾವಿರ ಪ್ರೋತ್ಸಾಹ ಧನದ ಚೆಕ್ಗಳನ್ನು ವಿತರಿಸಿದರು.
ನಿಗಮದಿಂದ ಬಡ ಮಹಿಳೆಯರಿಗೆ, ಬೀದಿ ವ್ಯಾಪಾರಿಗಳಿಗೆ ಆರ್ಥಿಕ ಸೌಲಭ್ಯ ಕಲ್ಪಿಸುವ ಹಲವು ಯೋಜನೆಗಳಿವೆ. ಹೀಗಾಗಿ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ ಎಂದು ಟೆಂಗಳಿ ಹೇಳಿದರು.
ಭಂಕೂರ ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದರು.
ಬಿ.ಜೆ.ಪಿ ತಾಲೂಕು ಘಟಕದ ಅಧ್ಯಕ್ಷ ನಿಲಕಂಠರಾವ ಪಾಟೀಲ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಇಟಗಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ವಿಜಯಲಕ್ಷ್ಮಿ, ತಾ.ಪಂ. ಸದಸ್ಯ ಶರಣಪ್ಪ ಸಣಬೂ, ಮುಖಂಡರಾದ ಶಶಿಕಾಂತ ಪಾಟೀಲ, ಭರತ, ಗೋಪಾಲ, ಕಾಳನೂರು ಮುಖಂಡರಾದ ಪ್ರಭುಗೌಡ ಪಾಟೀಲ, ಶ್ರೀಶೈಲ ನಾಟೆಕಾರ ಇದ್ದರು.