ಆಯೋಗದ ಅಧ್ಯಕ್ಷ ನ್ಯಾ.ನಾಗಮೋಹನದಾಸ್ ಮಾತನಾಡಿ, ‘ಮೀಸಲಾತಿ ಎಂಬುದು ಹಿಂದುಳಿದ ಹಾಗೂ ದಲಿತ ಸಮುದಾಯದವರಿಗೆ ನೀಡಿದ ಭಿಕ್ಷೆಯಲ್ಲ. ಅದೊಂದು ಮಾನವ ಹಕ್ಕು. ಮೀಸಲಾತಿ ಇದ್ದುದರಿಂದಲೇ ದಲಿತರು ರಾಷ್ಟ್ರಪತಿ, ಉಪರಾಷ್ಟ್ರಪತಿ, ಉಪಪ್ರಧಾನಿ, ಸಚಿವರು, ಶಾಸಕರಾಗಿ, ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಸಾಧ್ಯವಾಗಿದೆ. ಆಯೋಗವು ಎಲ್ಲ ವಿಭಾಗಗಳಲ್ಲಿ ಸಮಾಲೋಚನಾ ಸಭೆಗಳನ್ನು ನಡೆಸಿ, ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ’ ಎಂದು ಅವರು ಹೇಳಿದರು.