ತಾಲ್ಲೂಕಿನಲ್ಲಿ ಸುಮಾರು 40 ಸಾವಿರ ಎಕರೆ ಕಬ್ಬು ನಾಟಿ ಮಾಡಲಾಗಿದೆ. ಕಬ್ಬು ಕಟಾವಿನ ಹಂತದಲ್ಲಿ ಕೂಲಿಕಾರರು ದೊರೆಯುತ್ತಿಲ್ಲ. ಟೋಳಿಗಳು ಕಬ್ಬು ಕಡಿಯಲು ಪ್ರತಿ ಎಕರೆಗೆ ₹4–5 ಸಾವಿರ ಬೇಡುತ್ತಿದ್ದಾರೆ. ಇಷ್ಟೊಂದು ಹಣ ನೀಡಿದರೂ ಅರ್ಧಕ್ಕೆ ಬಿಟ್ಟು ಹೋಗುತ್ತಾರೆ ಹೀಗಾಗಿ ರೈತರಿಗೆ ದೊಡ್ಡ ಸಮಸ್ಯೆಯಾಗಿದೆ ಸಕ್ಕರೆ ಕಾರ್ಖಾನೆಯವರು ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಸರ್ಕಾರವು ಕ್ರಮಕೈಗೊಳ್ಳುತ್ತಿಲ್ಲ ಹೀಗಾಗಿ ರೈತರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡುವುದು ದೊಡ್ಡ ಸಮಸ್ಯೆಯಾಗಿದೆ ಎನ್ನುತ್ತಾರೆ ಕಬ್ಬು ಬೆಳೆಗಾರರ ಶಿವಣ್ಣ ಬಿಂಜಗೇರಿ.