<p><strong>ಕಲಬುರ್ಗಿ</strong>: ‘ಕೋವಿಡ್-19 ಸೋಂಕಿನ ಹೆಚ್ಚಾಗಿರುವ ಕಾರಣ ಈ ಬಾರಿಯ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಶಾಲಾ ಮಕ್ಕಳನ್ನು ಕರೆತರಬಾರದು. ಬರುವವರೆಲ್ಲರೂ ಮಾಸ್ಕ್, ಹ್ಯಾಂಡ್ಸ್ಯಾನಿಟೈಸರ್ ಹಾಗೂ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಶರತ್ ಸೂಚಿಸಿದರು.</p>.<p>ನಗರದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಆ. 15ರಂದು ಈ ಸಮಾರಂಭವನ್ನು ಹೆಚ್ಚು ಜಾಗರೂಕತೆಯಿಂದ ನೆರವೇರಿಸಬೇಕು. ಯಾವುದೇ ಲೋಪಕ್ಕೂ ಅವಕಾಶ ನೀಡಕೂಡದರು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಸಮಾರಂಭದಲ್ಲಿ ಹೆಚ್ಚು ಜನರು ಸೇರಬಾರದು. ಮಾಸ್ಕ್ ಧರಿಸದವರನ್ನು ಸಮಾರಂಭದ ಕಡೆಗೆ ಇಡಬಾರದು. ಸ್ಥಳದಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಬೇಕು. ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಕೇಂದ್ರ ಗೃಹ ಮಂತ್ರಾಲಯ ನೀಡಿರುವ ನಿರ್ದೇಶನಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ತಿಳಿಸಿದರು.</p>.<p>ಕೊರೊನಾ ವೈರಸ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಶಾಲಾ ಮಕ್ಕಳನ್ನು ಸಮಾರಂಭಕ್ಕೆ ಕರೆತರಬಾರದು. ಎನ್ಸಿಸಿ, ಸ್ಕೌಟ್ಸ್, ಹೋಂ ಗಾರ್ಡ್ ಹಾಗೂ ಪೊಲೀಸ್ ತಂಡಗಳ ಪಥಸಂಚನ ಮಾತ್ರ ನಡೆಸಬೇಕು. ಈ ಸಂಬಂಧ ಮೊದಲೇ ತಾಲೀಮು ಕೂಡ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಅವರು ಹೇಳಿದರು.</p>.<p>ಈ ಬಾರಿ ಕೋವಿಡ್-19 ಸಂಬಂಧಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸ್ತಬ್ಧಚಿತ್ರಗಳನ್ನು ತಯಾರಿಸಬೇಕು. ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ತಮ್ಮ ಇಲಾಖೆಗಳಲ್ಲಿ ಕೋವಿಡ್ ಸಂಬಂಧಿಸಿದ ಯೋಜನೆ/ ಕ್ರಮಗಳ ಕುರಿತ ಟ್ಯಾಬ್ಲೊ ನಿರ್ಮಿಸಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಕೇಂದ್ರದಲ್ಲಿ ಎಲ್ಲಾ ಕಚೇರಿಗಳಲ್ಲಿ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಂದು ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ಮಾಡಬೇಕು. ನಂತರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯುವ ಪ್ರಧಾನ ಕಾರ್ಯಕ್ರಮಕ್ಕೆ ಅಂದು ಬೆಳಿಗ್ಗೆ 8.30ರೊಳಗಾಗಿ ಬಂದು ಸೇರಬೇಕು. ಇಲ್ಲಿ ಸರಿಯಾಗಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು ಎಂದರು.</p>.<p><strong>ಸನ್ಮಾನ: </strong>ಕೋವಿಡ್ ನಿಯಂತ್ರಣಕ್ಕೆ ದುಡಿಯುತ್ತಿರುವ ವೈದ್ಯರು, ನರ್ಸ್, ಪೌರಕಾರ್ಮಿಕರು ಹಾಗೂ ಸೋಂಕಿನಿಂದ ಗುಣಮುಖರಾದ ಕೆಲವು ರೋಗಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಈ ಕುರಿತು ಪಟ್ಟಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.</p>.<p>ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮಾರಾಟ ಮಾಡಿದಲ್ಲಿ ಅಂತಹ ಅಂಗಡಿಗಳನ್ನು ಲೈಸನ್ಸ್ ರದ್ದುಪಡಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಮಿ ಮರಿಯಂ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ್ ವಣಿಕ್ಯಾಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ‘ಕೋವಿಡ್-19 ಸೋಂಕಿನ ಹೆಚ್ಚಾಗಿರುವ ಕಾರಣ ಈ ಬಾರಿಯ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಶಾಲಾ ಮಕ್ಕಳನ್ನು ಕರೆತರಬಾರದು. ಬರುವವರೆಲ್ಲರೂ ಮಾಸ್ಕ್, ಹ್ಯಾಂಡ್ಸ್ಯಾನಿಟೈಸರ್ ಹಾಗೂ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಶರತ್ ಸೂಚಿಸಿದರು.</p>.<p>ನಗರದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಆ. 15ರಂದು ಈ ಸಮಾರಂಭವನ್ನು ಹೆಚ್ಚು ಜಾಗರೂಕತೆಯಿಂದ ನೆರವೇರಿಸಬೇಕು. ಯಾವುದೇ ಲೋಪಕ್ಕೂ ಅವಕಾಶ ನೀಡಕೂಡದರು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ಸಮಾರಂಭದಲ್ಲಿ ಹೆಚ್ಚು ಜನರು ಸೇರಬಾರದು. ಮಾಸ್ಕ್ ಧರಿಸದವರನ್ನು ಸಮಾರಂಭದ ಕಡೆಗೆ ಇಡಬಾರದು. ಸ್ಥಳದಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಬೇಕು. ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಕೇಂದ್ರ ಗೃಹ ಮಂತ್ರಾಲಯ ನೀಡಿರುವ ನಿರ್ದೇಶನಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ತಿಳಿಸಿದರು.</p>.<p>ಕೊರೊನಾ ವೈರಸ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಶಾಲಾ ಮಕ್ಕಳನ್ನು ಸಮಾರಂಭಕ್ಕೆ ಕರೆತರಬಾರದು. ಎನ್ಸಿಸಿ, ಸ್ಕೌಟ್ಸ್, ಹೋಂ ಗಾರ್ಡ್ ಹಾಗೂ ಪೊಲೀಸ್ ತಂಡಗಳ ಪಥಸಂಚನ ಮಾತ್ರ ನಡೆಸಬೇಕು. ಈ ಸಂಬಂಧ ಮೊದಲೇ ತಾಲೀಮು ಕೂಡ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಅವರು ಹೇಳಿದರು.</p>.<p>ಈ ಬಾರಿ ಕೋವಿಡ್-19 ಸಂಬಂಧಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸ್ತಬ್ಧಚಿತ್ರಗಳನ್ನು ತಯಾರಿಸಬೇಕು. ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ತಮ್ಮ ಇಲಾಖೆಗಳಲ್ಲಿ ಕೋವಿಡ್ ಸಂಬಂಧಿಸಿದ ಯೋಜನೆ/ ಕ್ರಮಗಳ ಕುರಿತ ಟ್ಯಾಬ್ಲೊ ನಿರ್ಮಿಸಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಕೇಂದ್ರದಲ್ಲಿ ಎಲ್ಲಾ ಕಚೇರಿಗಳಲ್ಲಿ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಂದು ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ಮಾಡಬೇಕು. ನಂತರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯುವ ಪ್ರಧಾನ ಕಾರ್ಯಕ್ರಮಕ್ಕೆ ಅಂದು ಬೆಳಿಗ್ಗೆ 8.30ರೊಳಗಾಗಿ ಬಂದು ಸೇರಬೇಕು. ಇಲ್ಲಿ ಸರಿಯಾಗಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು ಎಂದರು.</p>.<p><strong>ಸನ್ಮಾನ: </strong>ಕೋವಿಡ್ ನಿಯಂತ್ರಣಕ್ಕೆ ದುಡಿಯುತ್ತಿರುವ ವೈದ್ಯರು, ನರ್ಸ್, ಪೌರಕಾರ್ಮಿಕರು ಹಾಗೂ ಸೋಂಕಿನಿಂದ ಗುಣಮುಖರಾದ ಕೆಲವು ರೋಗಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಈ ಕುರಿತು ಪಟ್ಟಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.</p>.<p>ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮಾರಾಟ ಮಾಡಿದಲ್ಲಿ ಅಂತಹ ಅಂಗಡಿಗಳನ್ನು ಲೈಸನ್ಸ್ ರದ್ದುಪಡಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಮಿ ಮರಿಯಂ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ್ ವಣಿಕ್ಯಾಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>