<p><strong>ಕಲಬುರಗಿ:</strong> ‘ವೈಜ್ಞಾನಿಕ ಸಂಶೋಧನೆಗಳ ಪ್ರಕಟಣೆಯಲ್ಲಿ ಭಾರತೀಯರು ನಾಲ್ಕನೇ ಸ್ಥಾನದಲ್ಲಿದ್ದು, ಉಲ್ಲೇಖದಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದೇವೆ’ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಸಚಿವ ಪ್ರೊ. ಆರ್.ಆರ್.ಬಿರಾದಾರ ಹೇಳಿದರು.</p>.<p>ಆಳಂದ ತಾಲ್ಲೂಕಿನ ಕಡಗಂಚಿಯ ಸಿಯುಕೆಯಲ್ಲಿ ಆಯೋಜಿಸಿರುವ ‘ಸಮಾಜ ವಿಜ್ಞಾನದಲ್ಲಿ ಯುವ ಅಧ್ಯಾಪಕ ಸದಸ್ಯರಿಗೆ ಸಂಶೋಧನಾ ವಿಧಾನ ಮತ್ತು ಗುಣಮಟ್ಟ ಪ್ರಕಟಣೆ ಕುರಿತು ಸಾಮರ್ಥ್ಯ ವೃದ್ಧಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಒಂದು ರಾಷ್ಟ್ರ, ಒಂದು ಚಂದಾದಾರಿಕೆಯಿಂದಾಗಿ 30,000ಕ್ಕೂ ಹೆಚ್ಚು ಪ್ರಕಾಶಕರನ್ನು ಪ್ರವೇಶಿಸಲು ನೆರವಾಗಿದೆ. 13,000 ಜರ್ನಲ್ಗಳಿಗೆ ಉಚಿತವಾಗಿ ಪ್ರವೇಶಿಸಬಹುದು. ಕಾರ್ಯಸಾಧ್ಯತೆ, ನಾವೀನ್ಯತೆ, ನೈತಿಕ ಮತ್ತು ಸಮಾಜಕ್ಕೆ ಪ್ರಸ್ತುತತೆಯೊಂದಿಗೆ ಸಂಶೋಧನೆಯನ್ನು ಗಂಭೀರವಾಗಿ ಪರಿಗಣಿಸುವ ಸಮಯ ಇದು’ ಎಂದರು.</p>.<p>‘ಸಂಶೋಧನೆಯ ಗುಣಮಟ್ಟವು ಉನ್ನತ ಶಿಕ್ಷಣದ ಭವಿಷ್ಯವನ್ನು ನಿರ್ಧರಿಸುತ್ತದೆ. ಈ ಕಾರ್ಯಕ್ರಮವು ಸಂಶೋಧನೆ ಮತ್ತು ಸಮಾಜವನ್ನು ದೊಡ್ಡ ಪ್ರಮಾಣದಲ್ಲಿ ಸಂಪರ್ಕಿಸುತ್ತದೆ’ ಎಂದು ಶಿಕ್ಷಣ ಇಲಾಖೆಯ ಕಾರ್ಯಕ್ರಮ ನಿರ್ದೇಶಕ ಪ್ರೊ.ಜಿ.ಆರ್ ಅಂಗಡಿ ಹೇಳಿದರು.</p>.<p>‘ರಾಷ್ಟ್ರ ನಿರ್ಮಾಣದಲ್ಲಿ ಸಂಶೋಧನೆ ಮತ್ತು ಯುವ ಅಧ್ಯಾಪಕರು ಜ್ಞಾನಕ್ಕೆ ಕೊಡುಗೆ ನೀಡುವಂತೆ ಪ್ರೋತ್ಸಾಹಿಸುವುದು ಇಂದಿನ ಅಗತ್ಯವಾಗಿದೆ. ಇದು ಕಠಿಣ ಸಂಶೋಧನಾ ಅಭ್ಯಾಸಗಳನ್ನು ಸೃಷ್ಟಿಸುತ್ತದೆ’ ಎಂದು ಧಾರವಾಡದ ಬಹುಶಿಸ್ತೀಯ ಅಭಿವೃದ್ಧಿ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ. ಬಸವಪ್ರಭು ಜಿರ್ಲಿ ತಿಳಿಸಿದರು. </p>.<p>ಜುಲೈ 18ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ವೈಜ್ಞಾನಿಕ ಸಂಶೋಧನೆಗಳ ಪ್ರಕಟಣೆಯಲ್ಲಿ ಭಾರತೀಯರು ನಾಲ್ಕನೇ ಸ್ಥಾನದಲ್ಲಿದ್ದು, ಉಲ್ಲೇಖದಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದೇವೆ’ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಸಚಿವ ಪ್ರೊ. ಆರ್.ಆರ್.ಬಿರಾದಾರ ಹೇಳಿದರು.</p>.<p>ಆಳಂದ ತಾಲ್ಲೂಕಿನ ಕಡಗಂಚಿಯ ಸಿಯುಕೆಯಲ್ಲಿ ಆಯೋಜಿಸಿರುವ ‘ಸಮಾಜ ವಿಜ್ಞಾನದಲ್ಲಿ ಯುವ ಅಧ್ಯಾಪಕ ಸದಸ್ಯರಿಗೆ ಸಂಶೋಧನಾ ವಿಧಾನ ಮತ್ತು ಗುಣಮಟ್ಟ ಪ್ರಕಟಣೆ ಕುರಿತು ಸಾಮರ್ಥ್ಯ ವೃದ್ಧಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಒಂದು ರಾಷ್ಟ್ರ, ಒಂದು ಚಂದಾದಾರಿಕೆಯಿಂದಾಗಿ 30,000ಕ್ಕೂ ಹೆಚ್ಚು ಪ್ರಕಾಶಕರನ್ನು ಪ್ರವೇಶಿಸಲು ನೆರವಾಗಿದೆ. 13,000 ಜರ್ನಲ್ಗಳಿಗೆ ಉಚಿತವಾಗಿ ಪ್ರವೇಶಿಸಬಹುದು. ಕಾರ್ಯಸಾಧ್ಯತೆ, ನಾವೀನ್ಯತೆ, ನೈತಿಕ ಮತ್ತು ಸಮಾಜಕ್ಕೆ ಪ್ರಸ್ತುತತೆಯೊಂದಿಗೆ ಸಂಶೋಧನೆಯನ್ನು ಗಂಭೀರವಾಗಿ ಪರಿಗಣಿಸುವ ಸಮಯ ಇದು’ ಎಂದರು.</p>.<p>‘ಸಂಶೋಧನೆಯ ಗುಣಮಟ್ಟವು ಉನ್ನತ ಶಿಕ್ಷಣದ ಭವಿಷ್ಯವನ್ನು ನಿರ್ಧರಿಸುತ್ತದೆ. ಈ ಕಾರ್ಯಕ್ರಮವು ಸಂಶೋಧನೆ ಮತ್ತು ಸಮಾಜವನ್ನು ದೊಡ್ಡ ಪ್ರಮಾಣದಲ್ಲಿ ಸಂಪರ್ಕಿಸುತ್ತದೆ’ ಎಂದು ಶಿಕ್ಷಣ ಇಲಾಖೆಯ ಕಾರ್ಯಕ್ರಮ ನಿರ್ದೇಶಕ ಪ್ರೊ.ಜಿ.ಆರ್ ಅಂಗಡಿ ಹೇಳಿದರು.</p>.<p>‘ರಾಷ್ಟ್ರ ನಿರ್ಮಾಣದಲ್ಲಿ ಸಂಶೋಧನೆ ಮತ್ತು ಯುವ ಅಧ್ಯಾಪಕರು ಜ್ಞಾನಕ್ಕೆ ಕೊಡುಗೆ ನೀಡುವಂತೆ ಪ್ರೋತ್ಸಾಹಿಸುವುದು ಇಂದಿನ ಅಗತ್ಯವಾಗಿದೆ. ಇದು ಕಠಿಣ ಸಂಶೋಧನಾ ಅಭ್ಯಾಸಗಳನ್ನು ಸೃಷ್ಟಿಸುತ್ತದೆ’ ಎಂದು ಧಾರವಾಡದ ಬಹುಶಿಸ್ತೀಯ ಅಭಿವೃದ್ಧಿ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ. ಬಸವಪ್ರಭು ಜಿರ್ಲಿ ತಿಳಿಸಿದರು. </p>.<p>ಜುಲೈ 18ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>