<p><strong>ಕಲಬುರ್ಗಿ: </strong>ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ಗಳನ್ನು ಆರಂಭಿಸಿ ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.</p>.<p>ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸುತ್ತಮುತ್ತ ಈಗಾಗಲೇ ಹಲವು ಕೈಗಾರಿಕೆಗಳಿವೆ. ಇನ್ನು ಮುಂದೆ ಬರುವ ಕೈಗಾರಿಕೆಗಳನ್ನು ಟಯರ್-2, ಟಯರ್-3 ನಗರಗಳಲ್ಲಿ ಆರಂಭಿಸಲು ಕೈಗಾರಿಕಾ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ. ಕಲಬುರ್ಗಿಯಲ್ಲಿ ವಿಮಾನ ನಿಲ್ದಾಣ ಆರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಕೈಗಾರಿಕೆಗಳು ಇತ್ತ ಬರಲಿವೆ ಎಂದು ಆಶಿಸಿದರು.</p>.<p>ಕೊಪ್ಪಳದಲ್ಲಿ ಬೊಂಬೆ ತಯಾರಿಕಾ ಘಟಕಕ್ಕೆ ಚಾಲನೆ ನೀಡಲಾಗಿದೆ. ಈ ಜಿಲ್ಲೆಯೊಂದರಲ್ಲೇ ₹ 5 ಸಾವಿರದಿಂದ ₹ 7 ಸಾವಿರ ಕೋಟಿ ಹೂಡಿಕೆಯಾಗಲಿದ್ದು, 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.</p>.<p>ಯಾದಗಿರಿ ಜಿಲ್ಲೆಯ ಕಡೇಚೂರಿನಲ್ಲಿ 3 ಸಾವಿರ ಎಕರೆ ಕೈಗಾರಿಕಾ ಪ್ರದೇಶವಿದ್ದು, ಅಲ್ಲಿ ಔಷಧಿ ತಯಾರಿಕಾ ಘಟಕಗಳ ಆರಂಭಕ್ಕೆ 1 ಸಾವಿರ ಎಕರೆ ಭೂಮಿಯನ್ನು ಬಳಸಿಕೊಳ್ಳಲಾಗುವುದು. ಔಷಧ ತಯಾರಿಕಾ ಘಟಕದ ಬಗ್ಗೆ ಚರ್ಚಿಸಲು ಶೀಘ್ರ ದೆಹಲಿಗೆ ತೆರಳಿ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಭೇಟಿ ಮಾಡಲಿದ್ದೇನೆ ಎಂದು ಶೆಟ್ಟರ್ ಹೇಳಿದರು.</p>.<p>ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಒಟ್ಟು 62 ಕೈಗಾರಿಕೆಗಳಿಗೆ ಅನುಮೋದನೆ ನೀಡಿದ್ದು, ₹ 2531 ಕೋಟಿ ಮೊತ್ತದ ಹೂಡಿಕೆಯಾಗಲಿದೆ ಎಂದರು.</p>.<p>ಕೊರೊನಾದಿಂದ ಸಂಕಷ್ಟಕ್ಕೀಡಾದ ಕೈಗಾರಿಕಾ ಕ್ಷೇತ್ರಕ್ಕೆ ಉತ್ತೇಜನ ನೀಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ₹ 3 ಲಕ್ಷ ಕೋಟಿ ಪ್ಯಾಕೇಜ್ ಪ್ರಕಟಿಸಿದ್ದಾರೆ. ಸಾಲದ ಕಂತನ್ನು ಮುಂದಕ್ಕೆ ಹಾಕಿದ್ದಾರೆ. ರಾಜ್ಯ ಸರ್ಕಾರವೂ ಇದಕ್ಕೆ ಪೂರಕವಾಗಿ ಸಣ್ಣ, ಸೂಕ್ಷ್ಮ, ಮಧ್ಯಮ ಕೈಗಾರಿಕೆಗಳ ಮೂರು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡಿದೆ ಎಂದು ವಿವರಿಸಿದರು.</p>.<p><strong>ನಾಯಕತ್ವ ಬದಲಾವಣೆ ಹೇಳಿಕೆ ಸರಿಯಲ್ಲ:</strong></p>.<p>ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಈ ಬಗ್ಗೆ ನಮ್ಮ ಪಕ್ಷದ ಶಾಸಕರು ವಿಭಿನ್ನ ಹೇಳಿಕೆ ನೀಡುವುದರಿಂದ ದೈನಂದಿನ ಆಡಳಿತದ ಮೇಲೆ ಪರಿಣಾಮ ಬೀರಲಿದೆ ಎಂದು ಶೆಟ್ಟರ್ ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ಗಳನ್ನು ಆರಂಭಿಸಿ ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.</p>.<p>ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸುತ್ತಮುತ್ತ ಈಗಾಗಲೇ ಹಲವು ಕೈಗಾರಿಕೆಗಳಿವೆ. ಇನ್ನು ಮುಂದೆ ಬರುವ ಕೈಗಾರಿಕೆಗಳನ್ನು ಟಯರ್-2, ಟಯರ್-3 ನಗರಗಳಲ್ಲಿ ಆರಂಭಿಸಲು ಕೈಗಾರಿಕಾ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ. ಕಲಬುರ್ಗಿಯಲ್ಲಿ ವಿಮಾನ ನಿಲ್ದಾಣ ಆರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಕೈಗಾರಿಕೆಗಳು ಇತ್ತ ಬರಲಿವೆ ಎಂದು ಆಶಿಸಿದರು.</p>.<p>ಕೊಪ್ಪಳದಲ್ಲಿ ಬೊಂಬೆ ತಯಾರಿಕಾ ಘಟಕಕ್ಕೆ ಚಾಲನೆ ನೀಡಲಾಗಿದೆ. ಈ ಜಿಲ್ಲೆಯೊಂದರಲ್ಲೇ ₹ 5 ಸಾವಿರದಿಂದ ₹ 7 ಸಾವಿರ ಕೋಟಿ ಹೂಡಿಕೆಯಾಗಲಿದ್ದು, 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.</p>.<p>ಯಾದಗಿರಿ ಜಿಲ್ಲೆಯ ಕಡೇಚೂರಿನಲ್ಲಿ 3 ಸಾವಿರ ಎಕರೆ ಕೈಗಾರಿಕಾ ಪ್ರದೇಶವಿದ್ದು, ಅಲ್ಲಿ ಔಷಧಿ ತಯಾರಿಕಾ ಘಟಕಗಳ ಆರಂಭಕ್ಕೆ 1 ಸಾವಿರ ಎಕರೆ ಭೂಮಿಯನ್ನು ಬಳಸಿಕೊಳ್ಳಲಾಗುವುದು. ಔಷಧ ತಯಾರಿಕಾ ಘಟಕದ ಬಗ್ಗೆ ಚರ್ಚಿಸಲು ಶೀಘ್ರ ದೆಹಲಿಗೆ ತೆರಳಿ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಭೇಟಿ ಮಾಡಲಿದ್ದೇನೆ ಎಂದು ಶೆಟ್ಟರ್ ಹೇಳಿದರು.</p>.<p>ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಒಟ್ಟು 62 ಕೈಗಾರಿಕೆಗಳಿಗೆ ಅನುಮೋದನೆ ನೀಡಿದ್ದು, ₹ 2531 ಕೋಟಿ ಮೊತ್ತದ ಹೂಡಿಕೆಯಾಗಲಿದೆ ಎಂದರು.</p>.<p>ಕೊರೊನಾದಿಂದ ಸಂಕಷ್ಟಕ್ಕೀಡಾದ ಕೈಗಾರಿಕಾ ಕ್ಷೇತ್ರಕ್ಕೆ ಉತ್ತೇಜನ ನೀಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ₹ 3 ಲಕ್ಷ ಕೋಟಿ ಪ್ಯಾಕೇಜ್ ಪ್ರಕಟಿಸಿದ್ದಾರೆ. ಸಾಲದ ಕಂತನ್ನು ಮುಂದಕ್ಕೆ ಹಾಕಿದ್ದಾರೆ. ರಾಜ್ಯ ಸರ್ಕಾರವೂ ಇದಕ್ಕೆ ಪೂರಕವಾಗಿ ಸಣ್ಣ, ಸೂಕ್ಷ್ಮ, ಮಧ್ಯಮ ಕೈಗಾರಿಕೆಗಳ ಮೂರು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡಿದೆ ಎಂದು ವಿವರಿಸಿದರು.</p>.<p><strong>ನಾಯಕತ್ವ ಬದಲಾವಣೆ ಹೇಳಿಕೆ ಸರಿಯಲ್ಲ:</strong></p>.<p>ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಈ ಬಗ್ಗೆ ನಮ್ಮ ಪಕ್ಷದ ಶಾಸಕರು ವಿಭಿನ್ನ ಹೇಳಿಕೆ ನೀಡುವುದರಿಂದ ದೈನಂದಿನ ಆಡಳಿತದ ಮೇಲೆ ಪರಿಣಾಮ ಬೀರಲಿದೆ ಎಂದು ಶೆಟ್ಟರ್ ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>