ಕಲಬುರ್ಗಿ: ‘ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್ನಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಈಗಿರುವುದಕ್ಕಿಂತ ದುಪ್ಪಟ್ಟು ಹೆಚ್ಚುವ ಸಾಧ್ಯತೆ ಇದೆ. ಕಾರಣ, ಜಿಲ್ಲೆಯ ಜನರು ನಿರ್ದಿಷ್ಟ ಅಂತರ, ಮಾಸ್ಕ್, ಸ್ಯಾನಿಟೈಸರ್ ಎಂಬ ಮೂರು ಸುರಕ್ಷತಾ ಕ್ರಮಗಳನ್ನು ಚಾಚೂತಪ್ಪದೇ ಅನುಸರಿಸಬೇಕು’ ಎಂದು ಸಂಸದ ಡಾ.ಉಮೇಶ ಜಾಧವ ಎಚ್ಚರಿಸಿದರು.