<p><strong>ಯಡ್ರಾಮಿ:</strong> ತಾಲ್ಲೂಕಿನ ಇಜೇರಿ ಗ್ರಾಮದಲ್ಲಿರುವ ಮೌಲಾನಾ ಅಜಾದ್ ಅಲ್ಪಸಂಖ್ಯಾತರ ಬಾಲಕರ ವಸತಿ ನಿಲಯದ ಅವ್ಯವಸ್ಥೆ ಹಾಗೂ ಮೂಲಸೌಲಭ್ಯಗಳ ಕೊರತೆ ಕುರಿತು ‘ಮೂಲ ಸೌಕರ್ಯವಿಲ್ಲ ವಿದ್ಯಾರ್ಥಿಗಳ ಕಣ್ಣೀರು’ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.</p>.<p>ವರದಿಯಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ವಸತಿ ನಿಲಯಕ್ಕೆ ಮೂಲಸೌಲಭ್ಯ ಒದಗಿಸಲು ಕ್ರಮಕೈಗೊಂಡಿದ್ದಾರೆ. ಸದ್ಯ ಶಾಲೆಯಲ್ಲಿ ಎಲೆಕ್ಟ್ರಿಕ್ ವ್ಯವಸ್ಥೆಯನ್ನು ಸರಿಪಡಿಸಿದ್ದು, ಕಟ್ಟಡದ ಗೋಡೆಗಳಿಗೆ ಬಣ್ಣ ಬಳಿಯಲಾಗುತ್ತಿದೆ. ಉಳಿದಂತೆ ಎಲ್ಲ ಮೂಲಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. </p>.<p>ಜಿಲ್ಲಾ ಅಧಿಕಾರಿ ಮತ್ತು ತಾಲ್ಲೂಕು ಅಧಿಕಾರಿ(ಟಿಎಂಇಒ) ಅವರು ‘ಪ್ರಜಾವಾಣಿ’ ವರದಿ ಗಮನಿಸಿ, ಮೌಲಾನಾ ಆಜಾದ್ ವಸತಿ ಶಾಲೆ ಪ್ರಭಾರ ವಾರ್ಡನ್ ವಿಶ್ವನಾಥ ರಾಸುಣಗಿ ಅವರಿಗೆ ಶಾಲೆಗೆ ಮೂಲಸೌಕರ್ಯ ಒದಗಿಸುವಂತೆ ನೋಟಿಸ್ ನೀಡಿದ್ದಾರೆ.</p>.<p>ಮೇಲಧಿಕಾರಿಗಳ ಸೂಚನೆಯಂತೆ ವಾರ್ಡನ್ ವಿಶ್ವನಾಥ ಅವರು, ‘ಶಾಲೆಗೆ ಸುಣ್ಣ-ಬಣ್ಣ ಹಚ್ಚಲು ಕ್ರಮಕೈಗೊಂಡಿದ್ದಾರೆ. ಲೈಟಿಂಗ್, ಫ್ಯಾನ್, ಎಲೆಕ್ಟ್ರಿಕ್ ಕೆಲಸ ಮುಗಿದಿದೆ. ಮುರಿದು ಹೋಗಿದ್ದ ಕಿಟಕಿ, ಬಾಗಿಲುಗಳನ್ನು ದುರಸ್ತಿಗೊಳಿಸಲಾಗಿದೆ. ಸುಣ್ಣ-ಬಣ್ಣ ಹಚ್ಚುವ ಕೆಲಸ ಪ್ರಗತಿಯಲ್ಲಿದೆ. ಉಳಿದ ಕೆಲಸಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಡ್ರಾಮಿ:</strong> ತಾಲ್ಲೂಕಿನ ಇಜೇರಿ ಗ್ರಾಮದಲ್ಲಿರುವ ಮೌಲಾನಾ ಅಜಾದ್ ಅಲ್ಪಸಂಖ್ಯಾತರ ಬಾಲಕರ ವಸತಿ ನಿಲಯದ ಅವ್ಯವಸ್ಥೆ ಹಾಗೂ ಮೂಲಸೌಲಭ್ಯಗಳ ಕೊರತೆ ಕುರಿತು ‘ಮೂಲ ಸೌಕರ್ಯವಿಲ್ಲ ವಿದ್ಯಾರ್ಥಿಗಳ ಕಣ್ಣೀರು’ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.</p>.<p>ವರದಿಯಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ವಸತಿ ನಿಲಯಕ್ಕೆ ಮೂಲಸೌಲಭ್ಯ ಒದಗಿಸಲು ಕ್ರಮಕೈಗೊಂಡಿದ್ದಾರೆ. ಸದ್ಯ ಶಾಲೆಯಲ್ಲಿ ಎಲೆಕ್ಟ್ರಿಕ್ ವ್ಯವಸ್ಥೆಯನ್ನು ಸರಿಪಡಿಸಿದ್ದು, ಕಟ್ಟಡದ ಗೋಡೆಗಳಿಗೆ ಬಣ್ಣ ಬಳಿಯಲಾಗುತ್ತಿದೆ. ಉಳಿದಂತೆ ಎಲ್ಲ ಮೂಲಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. </p>.<p>ಜಿಲ್ಲಾ ಅಧಿಕಾರಿ ಮತ್ತು ತಾಲ್ಲೂಕು ಅಧಿಕಾರಿ(ಟಿಎಂಇಒ) ಅವರು ‘ಪ್ರಜಾವಾಣಿ’ ವರದಿ ಗಮನಿಸಿ, ಮೌಲಾನಾ ಆಜಾದ್ ವಸತಿ ಶಾಲೆ ಪ್ರಭಾರ ವಾರ್ಡನ್ ವಿಶ್ವನಾಥ ರಾಸುಣಗಿ ಅವರಿಗೆ ಶಾಲೆಗೆ ಮೂಲಸೌಕರ್ಯ ಒದಗಿಸುವಂತೆ ನೋಟಿಸ್ ನೀಡಿದ್ದಾರೆ.</p>.<p>ಮೇಲಧಿಕಾರಿಗಳ ಸೂಚನೆಯಂತೆ ವಾರ್ಡನ್ ವಿಶ್ವನಾಥ ಅವರು, ‘ಶಾಲೆಗೆ ಸುಣ್ಣ-ಬಣ್ಣ ಹಚ್ಚಲು ಕ್ರಮಕೈಗೊಂಡಿದ್ದಾರೆ. ಲೈಟಿಂಗ್, ಫ್ಯಾನ್, ಎಲೆಕ್ಟ್ರಿಕ್ ಕೆಲಸ ಮುಗಿದಿದೆ. ಮುರಿದು ಹೋಗಿದ್ದ ಕಿಟಕಿ, ಬಾಗಿಲುಗಳನ್ನು ದುರಸ್ತಿಗೊಳಿಸಲಾಗಿದೆ. ಸುಣ್ಣ-ಬಣ್ಣ ಹಚ್ಚುವ ಕೆಲಸ ಪ್ರಗತಿಯಲ್ಲಿದೆ. ಉಳಿದ ಕೆಲಸಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>