ಈ ಬಗ್ಗೆ ಮಂಗಳವಾರ ಸಭೆ ನಡೆಸಿದ ಸಂಘದ ಮುಖಂಡರು, ‘ಕೆಕೆಆರ್ಡಿಬಿಯ ಈ ನೀತಿಯಿಂದ ಗುತ್ತಿಗೆದಾರರಿಗೆ ಕೆಲಸವಿಲ್ಲದಂತಾಗಿದೆ. ಹಿಂದೆ ಮಾಡಿದ ಕಾಮಗಾರಿಗಳ ಬಿಲ್ ಸಹ ಪಾವತಿಸಿಲ್ಲ. ಹಿಂದಿನ ಸರ್ಕಾರದಲ್ಲಿ ಬಾಕಿ ಇರುವ ಎಲ್ಲ ಬಿಲ್ಗಳನ್ನು ಪಾವತಿಸುತ್ತೇವೆ ಎಂದು ನಮ್ಮ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರ ಮುಂದೆ ಹೇಳಿದ್ದೀರಿ. ಬಳಿಕ ನಿಮಗೆ ಅನೇಕ ಸಲ ಮನವಿ ಸಲ್ಲಿಸಿದ್ದೇವೆ. ಕೆಕೆಆರ್ಡಿಬಿ ಗುತ್ತಿಗೆದಾರರಿಗೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಗಮನ ಹರಿಸಿ ನ್ಯಾಯ ಒದಗಿಸಬೇಕು’ ಎಂದು ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಸಚಿವ ಎನ್.ಎಸ್.ಬೋಸರಾಜು ಅವರಿಗೆ ಮನವಿ ಸಲ್ಲಿಸಿದ್ದಾರೆ.