<p><strong>ಕಲಬುರ್ಗಿ:</strong>ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.</p>.<p>ಹಿರಿಯ ವೈದ್ಯಾಧಿಕಾರಿ, ತಂತ್ರಜ್ಞರು,ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಮತ್ತು ದಂತ ವೈದ್ಯಾಧಿಕಾರಿಗಳ ಹುದ್ದೆಗಳು ಮತ್ತು ಬ್ಯಾಕ್ಲಾಗ್ ಹುದ್ದೆಗಳನೇಮಕಾತಿಗೆ 10-09-2020ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಕಲ್ಯಾಣ ಕರ್ನಾಟಕ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳು 151, ಹೈದರಾಬಾದ್ ಕರ್ನಾಟಕೇತರ 1,095 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.</p>.<p>ವೈದ್ಯಾಧಿಕಾರಿಗಳ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 3–4–2021 ರಂದು ಪ್ರಕಟಿಸಲಾಗಿದೆ. 371 (ಜೆ) ಸೌಲಭ್ಯ ಪಡೆಯಲು ಬಯಸಿದರೆ15 ದಿನಗಳ ಒಳಗಾಗಿ ಇಚ್ಛಾಪತ್ರವನ್ನು ಸಲ್ಲಿಸಬೇಕು ಎಂದು ಸೂಚಿಸಿದ್ದರು. ಅದರಲ್ಲಿ ಅನೇಕ ಅಭ್ಯರ್ಥಿಗಳು ಇಚ್ಛಾಪತ್ರವನ್ನು ಸಲ್ಲಿಸಿರುತ್ತಾರೆ. 12-05-2021 ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು,ಒಟ್ಟು 35 ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ಹೆಸರನ್ನು ಅಂತಿಮ ಆಯ್ಕೆಪಟ್ಟಿಯಿಂದ ಕೈಬಿಟ್ಟಿರುತ್ತಾರೆ ಎಂದು ನಮೋಶಿ ಆಕ್ಷೇಪಿಸಿದ್ದಾರೆ.</p>.<p>ಪಿಯು ಉಪನ್ಯಾಸಕರ ನೇಮಕಾತಿಯಲ್ಲಿಯೂ ಇದೇ ತರದ ತಪ್ಪಾಗಿತ್ತು. ನ್ಯಾಯಾಲಯದ ಸೂಚನೆಯ ನಂತರ ಅನ್ಯಾಯ ಸರಿಪಡಿಸಲಾಯಿತು. ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ಈ ಅನ್ಯಾಯ ಸರಿಪಡಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong>ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.</p>.<p>ಹಿರಿಯ ವೈದ್ಯಾಧಿಕಾರಿ, ತಂತ್ರಜ್ಞರು,ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಮತ್ತು ದಂತ ವೈದ್ಯಾಧಿಕಾರಿಗಳ ಹುದ್ದೆಗಳು ಮತ್ತು ಬ್ಯಾಕ್ಲಾಗ್ ಹುದ್ದೆಗಳನೇಮಕಾತಿಗೆ 10-09-2020ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಕಲ್ಯಾಣ ಕರ್ನಾಟಕ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳು 151, ಹೈದರಾಬಾದ್ ಕರ್ನಾಟಕೇತರ 1,095 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.</p>.<p>ವೈದ್ಯಾಧಿಕಾರಿಗಳ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 3–4–2021 ರಂದು ಪ್ರಕಟಿಸಲಾಗಿದೆ. 371 (ಜೆ) ಸೌಲಭ್ಯ ಪಡೆಯಲು ಬಯಸಿದರೆ15 ದಿನಗಳ ಒಳಗಾಗಿ ಇಚ್ಛಾಪತ್ರವನ್ನು ಸಲ್ಲಿಸಬೇಕು ಎಂದು ಸೂಚಿಸಿದ್ದರು. ಅದರಲ್ಲಿ ಅನೇಕ ಅಭ್ಯರ್ಥಿಗಳು ಇಚ್ಛಾಪತ್ರವನ್ನು ಸಲ್ಲಿಸಿರುತ್ತಾರೆ. 12-05-2021 ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು,ಒಟ್ಟು 35 ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ಹೆಸರನ್ನು ಅಂತಿಮ ಆಯ್ಕೆಪಟ್ಟಿಯಿಂದ ಕೈಬಿಟ್ಟಿರುತ್ತಾರೆ ಎಂದು ನಮೋಶಿ ಆಕ್ಷೇಪಿಸಿದ್ದಾರೆ.</p>.<p>ಪಿಯು ಉಪನ್ಯಾಸಕರ ನೇಮಕಾತಿಯಲ್ಲಿಯೂ ಇದೇ ತರದ ತಪ್ಪಾಗಿತ್ತು. ನ್ಯಾಯಾಲಯದ ಸೂಚನೆಯ ನಂತರ ಅನ್ಯಾಯ ಸರಿಪಡಿಸಲಾಯಿತು. ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ಈ ಅನ್ಯಾಯ ಸರಿಪಡಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>