<p><strong>ಯಡ್ರಾಮಿ</strong>: ಕಲಬುರಗಿ ಹೊರವಲಯದ ಕೋಟನೂರ (ಡಿ) ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.</p>.<p>ಬಸ್ ನಿಲ್ದಾಣ ಎದುರು ಮಾನವ ಸರಪಳಿ ನಿರ್ಮಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಟೈರ್ಗೆ ಬೆಂಕಿ ಹಚ್ಚಿ ಪತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೆಳಿಗ್ಗೆಯೇ ಪ್ರತಿಭಟನೆ ನಡೆಸಿದ್ದರಿಂದ ಬಸ್ ಸಂಚಾರ ವ್ಯತ್ಯಯ ಉಂಟಾಗಿ ಪ್ರಯಾಣಿಕರಿಗೆ ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಯಿತು. ರಸ್ತೆ ಬಂದ್ ಮಾಡಿದ್ದರಿಂದ ಖಾಸಗಿ ವಾಹನಗಳ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತು.</p>.<p>ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಜಿಲ್ಲಾ ಸಮಿತಿ ಸಂಚಾಲಕ ಮಲ್ಲಿಕಾರ್ಜುನ ಖುನ್ನಾ ಮಾತನಾಡಿ, ‘ಬಾಬಾಸಾಹೇಬರ ಪುತ್ಥಳಿಗೆ ಅಪಮಾನ ಮಾಡಿದ ಅಪರಾಧಿಗಳ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಿ ಅವರ ಆಸ್ತಿ ಮುಟ್ಟಗೋಲು ಹಾಕಿಕೊಳ್ಳಬೇಕು. ಗಡಿಪಾರು ಮಾಡಬೇಕು. ರಾಜ್ಯದಾದ್ಯಂತ ಡಾ.ಅಂಬೇಡ್ಕರ್ ಪ್ರತಿಮೆಗಳಿಗೆ ರಕ್ಷಣೆ ನೀಡಬೇಕು’ ಎಂದರು.</p>.<p>ಬಸವರಾಜ ಕಟ್ಟಿಮನಿ, ರವಿ ಶೃತಿ, ಮಾನಪ್ಪ ಕಟ್ಟಿಮನಿ, ಮಲ್ಲಪ್ಪ ಕಿಲದಮನಿ, ಶ್ರಾವಣ ಡಿ.ನಾಯಕ, ಮೈಬೂಬ ಸೌದಾಗರ್, ಹೊನ್ನಪ್ಪ ಬಡಿಗೇರ, ಸೈದಪ್ಪ ಶೃತಿ, ಅಶೋಕ ಕಟ್ಟಿಮನಿ, ಶರಣು ಮದರಿ, ತಾಯಪ್ಪ ಇಜೇರಿ, ರಾಜುಗಾಂಧಿ ಕಟ್ಟಿಮನಿ ಸೇರಿದಂತೆ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಡ್ರಾಮಿ</strong>: ಕಲಬುರಗಿ ಹೊರವಲಯದ ಕೋಟನೂರ (ಡಿ) ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲ್ಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.</p>.<p>ಬಸ್ ನಿಲ್ದಾಣ ಎದುರು ಮಾನವ ಸರಪಳಿ ನಿರ್ಮಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಟೈರ್ಗೆ ಬೆಂಕಿ ಹಚ್ಚಿ ಪತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬೆಳಿಗ್ಗೆಯೇ ಪ್ರತಿಭಟನೆ ನಡೆಸಿದ್ದರಿಂದ ಬಸ್ ಸಂಚಾರ ವ್ಯತ್ಯಯ ಉಂಟಾಗಿ ಪ್ರಯಾಣಿಕರಿಗೆ ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಯಿತು. ರಸ್ತೆ ಬಂದ್ ಮಾಡಿದ್ದರಿಂದ ಖಾಸಗಿ ವಾಹನಗಳ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತು.</p>.<p>ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಜಿಲ್ಲಾ ಸಮಿತಿ ಸಂಚಾಲಕ ಮಲ್ಲಿಕಾರ್ಜುನ ಖುನ್ನಾ ಮಾತನಾಡಿ, ‘ಬಾಬಾಸಾಹೇಬರ ಪುತ್ಥಳಿಗೆ ಅಪಮಾನ ಮಾಡಿದ ಅಪರಾಧಿಗಳ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಿ ಅವರ ಆಸ್ತಿ ಮುಟ್ಟಗೋಲು ಹಾಕಿಕೊಳ್ಳಬೇಕು. ಗಡಿಪಾರು ಮಾಡಬೇಕು. ರಾಜ್ಯದಾದ್ಯಂತ ಡಾ.ಅಂಬೇಡ್ಕರ್ ಪ್ರತಿಮೆಗಳಿಗೆ ರಕ್ಷಣೆ ನೀಡಬೇಕು’ ಎಂದರು.</p>.<p>ಬಸವರಾಜ ಕಟ್ಟಿಮನಿ, ರವಿ ಶೃತಿ, ಮಾನಪ್ಪ ಕಟ್ಟಿಮನಿ, ಮಲ್ಲಪ್ಪ ಕಿಲದಮನಿ, ಶ್ರಾವಣ ಡಿ.ನಾಯಕ, ಮೈಬೂಬ ಸೌದಾಗರ್, ಹೊನ್ನಪ್ಪ ಬಡಿಗೇರ, ಸೈದಪ್ಪ ಶೃತಿ, ಅಶೋಕ ಕಟ್ಟಿಮನಿ, ಶರಣು ಮದರಿ, ತಾಯಪ್ಪ ಇಜೇರಿ, ರಾಜುಗಾಂಧಿ ಕಟ್ಟಿಮನಿ ಸೇರಿದಂತೆ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>