<p><strong>ಕಲಬುರಗಿ: ‘</strong>ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಂಸದೀಯ ಪದ ಬಳಸಿ ನಿಂದಿಸಿದ್ದು ಖಂಡನೀಯ’ ಎಂದು ಕೆಕೆಆರ್ಡಿಬಿ ಅಧ್ಯಕ್ಷ, ಶಾಸಕ ಡಾ. ಅಜಯ್ ಸಿಂಗ್ ಹೇಳಿದ್ದಾರೆ.</p>.<p>‘ಪ್ರಿಯಾಂಕ್ ಅವರನ್ನು ಅವಮಾನಿಸಿದ ಬಿಜೆಪಿ ನಾಯಕರು ಆಡು ಭಾಷೆಯಲ್ಲಿ ಗಾದೆ ಮಾತು ಹೇಳಿದ್ದೇವೆ ಎಂದು ಸಮಜಾಯಿಷಿ ನೀಡಿದ್ದಾರೆ. ಇದು ಅಕ್ಷಮ್ಯ ಅಪರಾಧ. ನಂತರ ಕಲಬುರಗಿ ಹೋರಾಟ<br>ದಲ್ಲಿಯೂ ರಿಪಬ್ಲಿಕ್ ಆಫ್ ಕಲಬುರಗಿ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಇದು ಶುದ್ಧ ಸುಳ್ಳು. ಕಲಬುರಗಿ ಜನರಿಗೆ ಕಾಂಗ್ರೆಸ್ ಇತಿಹಾಸ ಗೊತ್ತಿದೆ. ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿ ನಡೆದಿದೆಯೇ ಹೊರತು ಬೇರಾವ ಕೆಲಸಗಳು ನಡೆದಿಲ್ಲ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಯಾರೇ ಆಗಲಿ ವೈಯಕ್ತಿಕ ಟೀಕೆಗಳಿಗೆ ಮುಂದಾಗಬಾರದು. ಚಿತ್ತಾಪುರ ಘಟನೆ ಸರಿ ತಪ್ಪೋ ಎಂದು ನಿರ್ಧರಿಸುವುದಕ್ಕಿಂತ ಅದು ಜನರ ಆ ಕ್ಷಣದ ಸ್ವಾಭಾವಿಕ ಆಕ್ರೋಶ ಆಗಿತ್ತು. ಹಾಗಂತ ಆ ಘಟನೆಗೆ ಪ್ರಿಯಾಂಕ್ ಅವರೇ ಪ್ರೇರಣೆ ಎಂದು ಆರೋಪಿಸುವುದು ಎಷ್ಟು ಸರಿ? ಪೊಲೀಸರು ಭದ್ರತೆ ದೃಷ್ಟಿಯಿಂದ <br>ತಮ್ಮ ಕೆಲಸ ಮಾಡಿದ್ದಾರೆ. ಇಡೀ ವ್ಯವಸ್ಥೆಯನ್ನೇ ಮನ ಬಂದಂತೆ ಟೀಕಿಸುವ ಬಿಜೆಪಿಗರದ್ದು ಮಿಥ್ಯಾರೋಪ’ ಎಂದು ಡಾ. ಅಜಯ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: ‘</strong>ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಂಸದೀಯ ಪದ ಬಳಸಿ ನಿಂದಿಸಿದ್ದು ಖಂಡನೀಯ’ ಎಂದು ಕೆಕೆಆರ್ಡಿಬಿ ಅಧ್ಯಕ್ಷ, ಶಾಸಕ ಡಾ. ಅಜಯ್ ಸಿಂಗ್ ಹೇಳಿದ್ದಾರೆ.</p>.<p>‘ಪ್ರಿಯಾಂಕ್ ಅವರನ್ನು ಅವಮಾನಿಸಿದ ಬಿಜೆಪಿ ನಾಯಕರು ಆಡು ಭಾಷೆಯಲ್ಲಿ ಗಾದೆ ಮಾತು ಹೇಳಿದ್ದೇವೆ ಎಂದು ಸಮಜಾಯಿಷಿ ನೀಡಿದ್ದಾರೆ. ಇದು ಅಕ್ಷಮ್ಯ ಅಪರಾಧ. ನಂತರ ಕಲಬುರಗಿ ಹೋರಾಟ<br>ದಲ್ಲಿಯೂ ರಿಪಬ್ಲಿಕ್ ಆಫ್ ಕಲಬುರಗಿ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಇದು ಶುದ್ಧ ಸುಳ್ಳು. ಕಲಬುರಗಿ ಜನರಿಗೆ ಕಾಂಗ್ರೆಸ್ ಇತಿಹಾಸ ಗೊತ್ತಿದೆ. ನಮ್ಮ ಪಕ್ಷ ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿ ನಡೆದಿದೆಯೇ ಹೊರತು ಬೇರಾವ ಕೆಲಸಗಳು ನಡೆದಿಲ್ಲ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಯಾರೇ ಆಗಲಿ ವೈಯಕ್ತಿಕ ಟೀಕೆಗಳಿಗೆ ಮುಂದಾಗಬಾರದು. ಚಿತ್ತಾಪುರ ಘಟನೆ ಸರಿ ತಪ್ಪೋ ಎಂದು ನಿರ್ಧರಿಸುವುದಕ್ಕಿಂತ ಅದು ಜನರ ಆ ಕ್ಷಣದ ಸ್ವಾಭಾವಿಕ ಆಕ್ರೋಶ ಆಗಿತ್ತು. ಹಾಗಂತ ಆ ಘಟನೆಗೆ ಪ್ರಿಯಾಂಕ್ ಅವರೇ ಪ್ರೇರಣೆ ಎಂದು ಆರೋಪಿಸುವುದು ಎಷ್ಟು ಸರಿ? ಪೊಲೀಸರು ಭದ್ರತೆ ದೃಷ್ಟಿಯಿಂದ <br>ತಮ್ಮ ಕೆಲಸ ಮಾಡಿದ್ದಾರೆ. ಇಡೀ ವ್ಯವಸ್ಥೆಯನ್ನೇ ಮನ ಬಂದಂತೆ ಟೀಕಿಸುವ ಬಿಜೆಪಿಗರದ್ದು ಮಿಥ್ಯಾರೋಪ’ ಎಂದು ಡಾ. ಅಜಯ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>