<p><strong>ಕಲಬುರಗಿ: </strong>2021–22ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳ ಸ್ಥಳೀಯ ನೈಸರ್ಗಿಕ ವಿಕೋಪದಡಿ ಜಿಲ್ಲೆಯ 9911 ರೈತ ದೂರುದಾರರಿಗೆ ಬಾಕಿ ಹಣ ಸೇರಿದಂತೆ ₹ 8.49 ಕೋಟಿ ಹಣವನ್ನು ಶೀಘ್ರದಲ್ಲಿಯೆ ಪಾವತಿಸಲಾಗುವುದು ಎಂದು ಯೂನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿಯ ಬೆಂಗಳೂರಿನ ಪ್ರತಿನಿಧಿಗಳು ಒಪ್ಪಿಕೊಂಡಿದ್ದಾರೆ.</p>.<p>ಬುಧವಾರ ನಡೆದ ಕರ್ನಾಟಕ ರೈತ ಸುರಕ್ಷಾ–ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾ ಮಟ್ಟದ ಕುಂದುಕೊರತೆ ಸಭೆಯಲ್ಲಿ ವಿಮೆ ಯೋಜನೆಯಡಿ ಜಿಲ್ಲೆಯಲ್ಲಿ ಬಾಕಿ ಉಳಿದ ರೈತರಿಗೆ ಬರಬೇಕಾದ ವಿಮಾ ಹಣ ಕೂಡಲೇ ಪಾವತಿಸುವಂತೆಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ವಿಮಾ ಕಂಪನಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿ 2021–22ನೇ ಸಾಲಿಗೆ ಸ್ಥಳೀಯ ನೈಸರ್ಗಿಕ ವಿಕೋಪ ಪರಿಹಾರದಡಿ ಜಿಲ್ಲೆಯಲ್ಲಿ 33,109 ದೂರುಗಳು ರೈತರಿಂದ ದಾಖಲಾಗಿವೆ. ಇದರಲ್ಲಿ 21,521 ರೈತರಿಗೆ ₹ 22 ಕೋಟಿ ಹಣ ಈಗಾಗಲೇ ಪಾವತಿಸಲಾಗಿದೆ. ಉಳಿದಂತೆ 3,480 ದೂರುದಾರ ರೈತರಿಗೆ ಭಾಗಶಃ ಹಣ ಪಾವತಿಸಿದ್ದು, ಬಾಕಿ ಹಣ ₹ 2.506 ಕೋಟಿಯನ್ನು ಏಪ್ರಿಲ್ 10ರೊಳಗೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವುದಾಗಿ ವಿಮಾ ಕಂಪನಿಯ ಪ್ರತಿನಿಧಿಗಳು ತಿಳಿಸಿದರು.</p>.<p>ಇದಲ್ಲದೇ ತಡವಾಗಿ ಬೆಳೆ ಹಾನಿ ದೂರನ್ನು ದಾಖಲಿಸಿದ 6,431 ರೈತರಿಗೂ ₹ 5.9 ಕೋಟಿ ಹಣವನ್ನು ಇದೇ ಏಪ್ರಿಲ್ 20ರೊಳಗಾಗಿ ಪಾವತಿಸಲಾಗುವುದೆಂದು ವಿಮಾ ಸಂಸ್ಥೆಯ ಪ್ರತಿನಿಧಿಗಳು ಒಪ್ಪಿಕೊಂಡರು.</p>.<p>ಇದರಿಂದ ಜಿಲ್ಲೆಯಲ್ಲಿ 2021–22ರ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಸ್ಥಳೀಯ ನೈಸರ್ಗಿಕ ವಿಕೋಪ ಘಟಕದಡಿ ಒಟ್ಟಾರೆ ದೂರು ಸಲ್ಲಿಸಿದ ಎಲ್ಲಾ ರೈತರಿಗೆ ಅರ್ಹ ವಿಮೆ ಪರಿಹಾರ ದೊರಕುವಂತಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.</p>.<p>ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಇಂತೆಜಾರ್ ಹುಸೇನ್, ಜಂಟಿ ಕೃಷಿ ನಿರ್ದೇಶಕ ಮತ್ತು ಸಮಿತಿ ಸದಸ್ಯ ಕಾರ್ಯದರ್ಶಿ ಡಾ. ರತೇಂದ್ರನಾಥ ಸೂಗೂರ, ವಿಮಾ ಸಂಸ್ಥೆಯ ಕಲಬುರಗಿ ಜಿಲ್ಲಾ ವ್ಯವಸ್ಥಾಪಕ ಮನಸೂರ್ ಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>2021–22ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳ ಸ್ಥಳೀಯ ನೈಸರ್ಗಿಕ ವಿಕೋಪದಡಿ ಜಿಲ್ಲೆಯ 9911 ರೈತ ದೂರುದಾರರಿಗೆ ಬಾಕಿ ಹಣ ಸೇರಿದಂತೆ ₹ 8.49 ಕೋಟಿ ಹಣವನ್ನು ಶೀಘ್ರದಲ್ಲಿಯೆ ಪಾವತಿಸಲಾಗುವುದು ಎಂದು ಯೂನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿಯ ಬೆಂಗಳೂರಿನ ಪ್ರತಿನಿಧಿಗಳು ಒಪ್ಪಿಕೊಂಡಿದ್ದಾರೆ.</p>.<p>ಬುಧವಾರ ನಡೆದ ಕರ್ನಾಟಕ ರೈತ ಸುರಕ್ಷಾ–ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಜಿಲ್ಲಾ ಮಟ್ಟದ ಕುಂದುಕೊರತೆ ಸಭೆಯಲ್ಲಿ ವಿಮೆ ಯೋಜನೆಯಡಿ ಜಿಲ್ಲೆಯಲ್ಲಿ ಬಾಕಿ ಉಳಿದ ರೈತರಿಗೆ ಬರಬೇಕಾದ ವಿಮಾ ಹಣ ಕೂಡಲೇ ಪಾವತಿಸುವಂತೆಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ವಿಮಾ ಕಂಪನಿಗಳಿಗೆ ಸೂಚಿಸಿದರು.</p>.<p>ಜಿಲ್ಲೆಯಲ್ಲಿ 2021–22ನೇ ಸಾಲಿಗೆ ಸ್ಥಳೀಯ ನೈಸರ್ಗಿಕ ವಿಕೋಪ ಪರಿಹಾರದಡಿ ಜಿಲ್ಲೆಯಲ್ಲಿ 33,109 ದೂರುಗಳು ರೈತರಿಂದ ದಾಖಲಾಗಿವೆ. ಇದರಲ್ಲಿ 21,521 ರೈತರಿಗೆ ₹ 22 ಕೋಟಿ ಹಣ ಈಗಾಗಲೇ ಪಾವತಿಸಲಾಗಿದೆ. ಉಳಿದಂತೆ 3,480 ದೂರುದಾರ ರೈತರಿಗೆ ಭಾಗಶಃ ಹಣ ಪಾವತಿಸಿದ್ದು, ಬಾಕಿ ಹಣ ₹ 2.506 ಕೋಟಿಯನ್ನು ಏಪ್ರಿಲ್ 10ರೊಳಗೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವುದಾಗಿ ವಿಮಾ ಕಂಪನಿಯ ಪ್ರತಿನಿಧಿಗಳು ತಿಳಿಸಿದರು.</p>.<p>ಇದಲ್ಲದೇ ತಡವಾಗಿ ಬೆಳೆ ಹಾನಿ ದೂರನ್ನು ದಾಖಲಿಸಿದ 6,431 ರೈತರಿಗೂ ₹ 5.9 ಕೋಟಿ ಹಣವನ್ನು ಇದೇ ಏಪ್ರಿಲ್ 20ರೊಳಗಾಗಿ ಪಾವತಿಸಲಾಗುವುದೆಂದು ವಿಮಾ ಸಂಸ್ಥೆಯ ಪ್ರತಿನಿಧಿಗಳು ಒಪ್ಪಿಕೊಂಡರು.</p>.<p>ಇದರಿಂದ ಜಿಲ್ಲೆಯಲ್ಲಿ 2021–22ರ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಸ್ಥಳೀಯ ನೈಸರ್ಗಿಕ ವಿಕೋಪ ಘಟಕದಡಿ ಒಟ್ಟಾರೆ ದೂರು ಸಲ್ಲಿಸಿದ ಎಲ್ಲಾ ರೈತರಿಗೆ ಅರ್ಹ ವಿಮೆ ಪರಿಹಾರ ದೊರಕುವಂತಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.</p>.<p>ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಇಂತೆಜಾರ್ ಹುಸೇನ್, ಜಂಟಿ ಕೃಷಿ ನಿರ್ದೇಶಕ ಮತ್ತು ಸಮಿತಿ ಸದಸ್ಯ ಕಾರ್ಯದರ್ಶಿ ಡಾ. ರತೇಂದ್ರನಾಥ ಸೂಗೂರ, ವಿಮಾ ಸಂಸ್ಥೆಯ ಕಲಬುರಗಿ ಜಿಲ್ಲಾ ವ್ಯವಸ್ಥಾಪಕ ಮನಸೂರ್ ಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>