ಜಿಲ್ಲೆಯಲ್ಲಿ 2021–22ನೇ ಸಾಲಿಗೆ ಸ್ಥಳೀಯ ನೈಸರ್ಗಿಕ ವಿಕೋಪ ಪರಿಹಾರದಡಿ ಜಿಲ್ಲೆಯಲ್ಲಿ 33,109 ದೂರುಗಳು ರೈತರಿಂದ ದಾಖಲಾಗಿವೆ. ಇದರಲ್ಲಿ 21,521 ರೈತರಿಗೆ ₹ 22 ಕೋಟಿ ಹಣ ಈಗಾಗಲೇ ಪಾವತಿಸಲಾಗಿದೆ. ಉಳಿದಂತೆ 3,480 ದೂರುದಾರ ರೈತರಿಗೆ ಭಾಗಶಃ ಹಣ ಪಾವತಿಸಿದ್ದು, ಬಾಕಿ ಹಣ ₹ 2.506 ಕೋಟಿಯನ್ನು ಏಪ್ರಿಲ್ 10ರೊಳಗೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವುದಾಗಿ ವಿಮಾ ಕಂಪನಿಯ ಪ್ರತಿನಿಧಿಗಳು ತಿಳಿಸಿದರು.