ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜೆನರಲ್ ಇನ್ಸೂರೆನ್ಸ್ ಕಂಪನಿಗೆ ವಹಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಧಳ, ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಪೋಟ ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡ... ಮುಂತಾದ ಸಂದರ್ಭದಲ್ಲಿ ಬೆಳೆ ನಷ್ಟವಾದರೆ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದು.