<p><strong>ಕಲಬುರಗಿ: </strong>ಇಲ್ಲಿನ ಕಲಬುರಗಿ–ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ಪ್ರಸಕ್ತ ಠೇವಣಿ ಮೇಲೆ ಆಕರ್ಷಕ ಬಡ್ಡಿ ನೀಡುವ ಯೋಜನೆ ಜಾರಿಗೆ ತಂದಿದೆ ಎಂದು ಬ್ಯಾಂಕ್ ಅಧ್ಯಕ್ಷ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.</p>.<p>‘ಬ್ಯಾಂಕ್ನಲ್ಲಿ ಠೇವಣಿ ಇಡುವ ಗ್ರಾಹಕರಿಗೆ ಶೇ 8.5ರಷ್ಟು ಬಡ್ಡಿ ನೀಡುವ ಮಹೋನ್ನತ ಯೋಜನೆ ಜಾರಿಗೆ ತರಲಾಗಿದೆ. ಬ್ಯಾಂಕ್ ₹ 19 ಕೋಟಿ ಲಾಭ ಗಳಿಸಿದೆ. ಹೀಗಾಗಿ ಠೇವಣಿ ಇಡುವ ಗ್ರಾಹಕರಿಗೆ ಲಾಭ ಮಾಡಿಕೊಡಲು ಬ್ಯಾಂಕ್ ಮುಂದಾಗಿದೆ. ಇದೇ ಕಾರಣಕ್ಕೆ ಠೇವಣಿ ಮೇಲೆ ಹೆಚ್ಚಿನ ಬಡ್ಡಿ ದರ ನೀಡುವ ಯೋಜನೆ ರೂಪಿಸಲಾಗಿದೆ. ಅಪೆಕ್ಸ್ ಬ್ಯಾಂಕ್, ನಬಾರ್ಡ್ ವಿಶ್ವಾಸ ಗಳಿಸಿದ್ದರಿಂದ ಡಿಸಿಸಿ ಬ್ಯಾಂಕ್ಗೆ ಇಲ್ಲಿಯವರೆಗೆ ₹ 375 ಕೋಟಿ ಠೇವಣಿ ಹರಿದು ಬಂದಿದೆ. 2023ರ ಮಾರ್ಚ್ ಅಂತ್ಯದವರೆಗೆ ₹ 600 ಕೋಟಿ ಠೇವಣಿ ಹೊಂದುವ ಬಗ್ಗೆ ನಿರೀಕ್ಷೆ ಹೊಂದಲಾಗಿದೆ’ ಎಂದಿದ್ದಾರೆ.</p>.<p>‘ಬ್ಯಾಂಕಿನಿಂದ ಪ್ರಸಕ್ತ ₹ 1 ಸಾವಿರ ಕೋಟಿ ಸಮೀಪ ರೈತರಿಗೆ ಬಡ್ಡಿ ರಹಿತ ಬೆಳೆ ಸಾಲ ನೀಡಲಾಗಿದೆ. ಮಹಿಳಾ ಸ್ವ ಸಹಾಯ ಸಂಘಗಳಿಗೆ ₹ 50 ಕೋಟಿ ಸಾಲ ನೀಡಲಾಗಿದೆ. ಹೈನುಗಾರರಿಗೆ ಸಾಲ ನೀಡುವುದನ್ನು ಜಾರಿಗೆ ತರಲಾಗಿದೆ. ಮುಂದಿನ ದಿನಗಳಲ್ಲಿ ಹೊಸ ಶಾಖೆಗಳನ್ನು ಪ್ರಾರಂಭಿಸುವುದು ಸೇರಿದಂತೆ ಹತ್ತಾರು ಯೋಜನೆಗಳನ್ನು ರೂಪಿಸಲಾಗಿದೆ’ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ಇಲ್ಲಿನ ಕಲಬುರಗಿ–ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ಪ್ರಸಕ್ತ ಠೇವಣಿ ಮೇಲೆ ಆಕರ್ಷಕ ಬಡ್ಡಿ ನೀಡುವ ಯೋಜನೆ ಜಾರಿಗೆ ತಂದಿದೆ ಎಂದು ಬ್ಯಾಂಕ್ ಅಧ್ಯಕ್ಷ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.</p>.<p>‘ಬ್ಯಾಂಕ್ನಲ್ಲಿ ಠೇವಣಿ ಇಡುವ ಗ್ರಾಹಕರಿಗೆ ಶೇ 8.5ರಷ್ಟು ಬಡ್ಡಿ ನೀಡುವ ಮಹೋನ್ನತ ಯೋಜನೆ ಜಾರಿಗೆ ತರಲಾಗಿದೆ. ಬ್ಯಾಂಕ್ ₹ 19 ಕೋಟಿ ಲಾಭ ಗಳಿಸಿದೆ. ಹೀಗಾಗಿ ಠೇವಣಿ ಇಡುವ ಗ್ರಾಹಕರಿಗೆ ಲಾಭ ಮಾಡಿಕೊಡಲು ಬ್ಯಾಂಕ್ ಮುಂದಾಗಿದೆ. ಇದೇ ಕಾರಣಕ್ಕೆ ಠೇವಣಿ ಮೇಲೆ ಹೆಚ್ಚಿನ ಬಡ್ಡಿ ದರ ನೀಡುವ ಯೋಜನೆ ರೂಪಿಸಲಾಗಿದೆ. ಅಪೆಕ್ಸ್ ಬ್ಯಾಂಕ್, ನಬಾರ್ಡ್ ವಿಶ್ವಾಸ ಗಳಿಸಿದ್ದರಿಂದ ಡಿಸಿಸಿ ಬ್ಯಾಂಕ್ಗೆ ಇಲ್ಲಿಯವರೆಗೆ ₹ 375 ಕೋಟಿ ಠೇವಣಿ ಹರಿದು ಬಂದಿದೆ. 2023ರ ಮಾರ್ಚ್ ಅಂತ್ಯದವರೆಗೆ ₹ 600 ಕೋಟಿ ಠೇವಣಿ ಹೊಂದುವ ಬಗ್ಗೆ ನಿರೀಕ್ಷೆ ಹೊಂದಲಾಗಿದೆ’ ಎಂದಿದ್ದಾರೆ.</p>.<p>‘ಬ್ಯಾಂಕಿನಿಂದ ಪ್ರಸಕ್ತ ₹ 1 ಸಾವಿರ ಕೋಟಿ ಸಮೀಪ ರೈತರಿಗೆ ಬಡ್ಡಿ ರಹಿತ ಬೆಳೆ ಸಾಲ ನೀಡಲಾಗಿದೆ. ಮಹಿಳಾ ಸ್ವ ಸಹಾಯ ಸಂಘಗಳಿಗೆ ₹ 50 ಕೋಟಿ ಸಾಲ ನೀಡಲಾಗಿದೆ. ಹೈನುಗಾರರಿಗೆ ಸಾಲ ನೀಡುವುದನ್ನು ಜಾರಿಗೆ ತರಲಾಗಿದೆ. ಮುಂದಿನ ದಿನಗಳಲ್ಲಿ ಹೊಸ ಶಾಖೆಗಳನ್ನು ಪ್ರಾರಂಭಿಸುವುದು ಸೇರಿದಂತೆ ಹತ್ತಾರು ಯೋಜನೆಗಳನ್ನು ರೂಪಿಸಲಾಗಿದೆ’ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>