<p><strong>ಕಲಬುರಗಿ</strong>: ‘ನಾವು ಆಚರಿಸುತ್ತಿರುವ 11ನೇ ಅಂತರರಾಷ್ಟ್ರೀಯ ಯೋಗ ದಿನವು ಇಡೀ ಜಗತ್ತಿಗೆ ಒಂದು ಐತಿಹಾಸಿಕ. ಯೋಗವನ್ನು ಭಾರತೀಯರು ಜಗತ್ತಿಗೆ ಪರಿಚಯಿಸಿ, ಉಡುಗೊರೆಯಾಗಿ ನೀಡಿದ್ದಾರೆ. ಪ್ರಪಂಚದಾದ್ಯಂತ 7 ಶತಕೋಟಿ ಜನರು ಇದರ ಪ್ರಯೋಜನವನ್ನು ಪಡೆದಿದ್ದಾರೆ’ ಎಂದು ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಅನಿಲಕುಮಾರ ಬಿಡವೆ ಅಭಿಪ್ರಾಯಪಟ್ಟರು.</p>.<p>ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾವು ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಒಂದು ವೇಳೆ ಔಷಧವು ವಿಫಲವಾದರೆ ಯೋಗವು ಸಹಾಯ ಮಾಡುತ್ತದೆ. ಅಲೋಪತಿ ವೈದ್ಯರೂ ಯೋಗವನ್ನು ಅಭ್ಯಾಸ ಮಾಡುತ್ತಾರೆ ಮತ್ತು ರೋಗಿಗಳಿಗೆ ಅದರ ಬಗ್ಗೆ ತಿಳಿಹೇಳಿ ಪ್ರೋತ್ಸಾಹಿಸುತ್ತಿದ್ದಾರೆ’ ಎಂದರು.</p>.<p>ಯೋಗ ಪರಿಣತರು ಯೋಗದ ಪ್ರಯೋಜನಗಳನ್ನು ತಿಳಿಸುತ್ತಾ ಯೋಗಾಸನಗಳನ್ನು ಮಾಡಿಸಿದರು.</p>.<p>ಕುಲಸಚಿವ ಎಸ್.ಜಿ. ಡೊಳ್ಳೆಗೌಡರ್, ಕುಲಸಚಿವ (ಮೌಲ್ಯಮಾಪನ) ಎಸ್.ಎಚ್. ಹೊನ್ನಳ್ಳಿ ಸೇರಿದಂತೆ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ನಾವು ಆಚರಿಸುತ್ತಿರುವ 11ನೇ ಅಂತರರಾಷ್ಟ್ರೀಯ ಯೋಗ ದಿನವು ಇಡೀ ಜಗತ್ತಿಗೆ ಒಂದು ಐತಿಹಾಸಿಕ. ಯೋಗವನ್ನು ಭಾರತೀಯರು ಜಗತ್ತಿಗೆ ಪರಿಚಯಿಸಿ, ಉಡುಗೊರೆಯಾಗಿ ನೀಡಿದ್ದಾರೆ. ಪ್ರಪಂಚದಾದ್ಯಂತ 7 ಶತಕೋಟಿ ಜನರು ಇದರ ಪ್ರಯೋಜನವನ್ನು ಪಡೆದಿದ್ದಾರೆ’ ಎಂದು ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಅನಿಲಕುಮಾರ ಬಿಡವೆ ಅಭಿಪ್ರಾಯಪಟ್ಟರು.</p>.<p>ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾವು ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಒಂದು ವೇಳೆ ಔಷಧವು ವಿಫಲವಾದರೆ ಯೋಗವು ಸಹಾಯ ಮಾಡುತ್ತದೆ. ಅಲೋಪತಿ ವೈದ್ಯರೂ ಯೋಗವನ್ನು ಅಭ್ಯಾಸ ಮಾಡುತ್ತಾರೆ ಮತ್ತು ರೋಗಿಗಳಿಗೆ ಅದರ ಬಗ್ಗೆ ತಿಳಿಹೇಳಿ ಪ್ರೋತ್ಸಾಹಿಸುತ್ತಿದ್ದಾರೆ’ ಎಂದರು.</p>.<p>ಯೋಗ ಪರಿಣತರು ಯೋಗದ ಪ್ರಯೋಜನಗಳನ್ನು ತಿಳಿಸುತ್ತಾ ಯೋಗಾಸನಗಳನ್ನು ಮಾಡಿಸಿದರು.</p>.<p>ಕುಲಸಚಿವ ಎಸ್.ಜಿ. ಡೊಳ್ಳೆಗೌಡರ್, ಕುಲಸಚಿವ (ಮೌಲ್ಯಮಾಪನ) ಎಸ್.ಎಚ್. ಹೊನ್ನಳ್ಳಿ ಸೇರಿದಂತೆ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>