ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಹಾವಳಿ ತಗ್ಗಿರುವುದರಿಂದ ಕಟ್ಟಡ ನಿರ್ಮಾಣ ಹಾಗೂ ಸೇವಾ ವಲಯದ ಚಟುವಟಿಕೆಗಳು ಚುರುಕಾಗಿವೆ. ಹೀಗಾಗಿ, ಬೆಂಗಳೂರು ಹೊರಗಡೆ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಕೈಗಾರಿಕೆಗಳು ಬರಲಿ ಎಂಬುದು ನಮ್ಮ ಅಪೇಕ್ಷೆ. ಅದರಂತೆ ಕೊಪ್ಪಳದಲ್ಲಿ ಇತ್ತೀಚೆಗೆ ಆಟಿಗೆ ಕ್ಲಸ್ಟರ್ಗೆ ಚಾಲನೆ ನೀಡಲಾಗಿದ್ದು, 25 ಸಾವಿರ ನೇರ ಉದ್ಯೋಗ ಸೃಷ್ಟಿಯಾಗಲಿದೆ. ಅದೇ ಮಾದರಿಯಲ್ಲಿ ಕಲಬುರ್ಗಿಯಲ್ಲಿಯೂ ಹಲವು ಉದ್ಯಮಗಳು ಬಂದರೆ ಒಳ್ಳೆಯದು. ಆ ನಿಟ್ಟಿನಲ್ಲಿ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು’ ಎಂದರು.