ಶಹಾಬಾದ್: 'ಡಾ.ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರು ದೇಶದ ದಲಿತ ಸಮುದಾಯದ 2 ಕಣ್ಣುಗಳಾಗಿ ಆ ವರ್ಗಗಳ ಅಭಿವೃದ್ಧಿಗೆ ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳು’ ಎಂದು ಶಹಾಬಾದ್ ತಹಸೀಲ್ದಾರ್ ಸುರೇಶ ವರ್ಮಾ ಹೇಳಿದರು.
ಮಂಗಳವಾರ ನಗರಸಭೆಯಲ್ಲಿ ಆಯೋಜಿಸಲಾದ ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.