ಕಲಬುರ್ಗಿ: ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಜನತಾ ದರ್ಶನ ನಡೆಸಿದರು.
ಈ ಸಂದರ್ಭದಲ್ಲಿ ನೂರಾರು ಮಂದಿ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಎಲ್ಲರ ಮನವಿ ಪಡೆದ ಉಪಮುಖ್ಯಮಂತ್ರಿ ಕಾರಜೋಳ ಸಮಸ್ಯೆಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಶೀಘ್ರವೇ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು.