‘ಬಾಳಸಂಗಾತಿಯ ಆಯ್ಕೆ ಯುವಕರ ಹಕ್ಕು. ಅವರ ಹಕ್ಕನ್ನು ಕಸಿಯುವ ಜಾತಿ ವ್ಯವಸ್ಥೆಯಿಂದಾಗಿ ಯುವಕ– ಯುವತಿಯರು ಮಾರ್ಯಾದೆಗೇಡು ಹತ್ಯೆಗೆ ಒಳಗಾಗುತ್ತಿದ್ದಾರೆ. ಇಂಥ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿದ್ದರೂ ಸರ್ಕಾರ ಏನೂ ಕ್ರಮ ಕೈಗೊಳ್ಳದೇ ಸುಮ್ಮನೇ ಕುಳಿತಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ಕೆ.ನೀರಾ ಕಿಡಿ ಕಾರಿದ್ದಾರೆ.