ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJP ಜೊತೆ JDS ಮೈತ್ರಿ: ದೇವೇಗೌಡರಿಗೆ ಕುಮಾರಸ್ವಾಮಿ ಬಲವಂತ- ಚಲುವರಾಯಸ್ವಾಮಿ

Published 3 ಅಕ್ಟೋಬರ್ 2023, 7:32 IST
Last Updated 3 ಅಕ್ಟೋಬರ್ 2023, 7:32 IST
ಅಕ್ಷರ ಗಾತ್ರ

ಕಲಬುರಗಿ: ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ‌ಮಾಡಿಕೊಳ್ಳುವ ಬಗ್ಗೆ ಎಚ್.ಡಿ. ದೇವೇಗೌಡರಿಗೆ ಇಷ್ಟವಿರಲಿಲ್ಲ. ಅದರೂ, ಎಚ್.ಡಿ.ಕುಮಾರಸ್ವಾಮಿ ಅವರು ಬಲವಂತ ಮಾಡಿ ಒಪ್ಪಿಸಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದರು.

ನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಯಾವ ವೇದಿಕೆಯಲ್ಲೂ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತನಾಡಿರಲಿಲ್ಲ. ಕುಮಾರಸ್ವಾಮಿ ಅವರು ದೇವೇಗೌಡರಿಗೆ ಮಾನಸಿಕ ಹಿಂಸೆ ನೀಡಿ ಒಪ್ಪಿಸಿದ್ದಾರೆ ಎಂದರು.

ಜೆಡಿಎಸ್-ಬಿಜೆಪಿ ಎರಡೂ ಮುಳುಗುವ ಹಡಗು ಇದ್ದಂತೆ. ಮುಳುಗುವ ಸಂದರ್ಭದಲ್ಲಿ ಒಬ್ಬರು ಇನ್ನೊಬ್ಬರ ಕೈ ಹಿಡಿದುಕೊಳ್ಳುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಯಾವುದೇ ಭಯ ಇಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದರು.

ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಕುಮಾರಸ್ವಾಮಿ ಅವರಿಗೆ ಮುಖವೇ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT