ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಯಾವ ಹಿಂದುಳಿದ ಮುಖಂಡರನ್ನು ಬೆಳೆಸಿದ್ದಾರೆ?: ಜೆಡಿಎಸ್ ನಾಯಕ

Last Updated 13 ಅಕ್ಟೋಬರ್ 2021, 7:10 IST
ಅಕ್ಷರ ಗಾತ್ರ

ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕದಲ್ಲಿ ಅಹಿಂದ ವರ್ಗಕ್ಕೆ ಸೇರಿದ ಯಾವ ಮುಖಂಡರನ್ನು ಗುರುತಿಸಿ ಅವರನ್ನು ವಿಧಾನಸಭೆಗೆ ಕಳುಹಿಸುವಲ್ಲಿ ಯಶ ಕಂಡಿದ್ದಾರೆ ಎನ್ನುವುದನ್ನು ಬಹಿರಂಗ ಮಾಡಬೇಕು ಎಂದು ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕಾರ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೀದರ್‌ನಲ್ಲಿ ದಿ. ನಾರಾಯಣರಾವ್ ಅವರನ್ನು ಹೊರತು ಪಡಿಸಿದರೆ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ವಿಜಯಪುರದಲ್ಲಿ ಯಾರಿಗೆ ಇವರು ಆಶೀರ್ವಾದ ಮಾಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರು ಅವರಿಗಿರುವ ಮೀಸಲಾತಿ ಬೆಂಬಲ ಪಡೆದು ಆಯ್ಕೆಯಾಗುತ್ತಾರೆ. ಅಲ್ಪಸಂಖ್ಯಾತರು, ಹಿಂದುಳಿದವರಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದಾರೆ ಎನ್ನುವುದು ಬಹಿರಂಗ ಪಡಿಸಲಿ’ ಎಂದು ಸವಾಲು ಹಾಕಿದ್ದಾರೆ.

‘ಕುರುಬ, ಕಬ್ಬಲಿಗ ಹೆಚ್ಚಿರುವಂತಹ ಕ್ಷೇತ್ರಗಳಲ್ಲೂ ಅವರಿಗೆ ಸ್ಪರ್ಧೆಗೆ ಅವಕಾಶ ಸಿಗೋದಿಲ್ಲ. ಕೊಡಿಸುವ ಗೋಜಿಗೆ ಹೋಗಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT