ಕಲಬುರ್ಗಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ರೈತರ ಬೆಳೆ ಹಾನಿಯ ಪರಿಹಾರವಾಗಿ ಪ್ರತಿ ಎಕರೆಗೆ ₹ 20 ಸಾವಿರ ನೀಡಬೇಕು ಎಂದು ಒತ್ತಾಯಿಸಿ ಜಾತ್ಯತೀತ ಜನತಾದಳದ ಯುವ ಘಟಕದ ವತಿಯಿಂದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಹಾನಿಯ ಪ್ರಮಾಣವನ್ನು ಪರಿಶೀಲಿಸಿ ಮರು ಬಿತ್ತನೆ ಮಾಡಲು ಅಗತ್ಯ ಬೀಜಗಳನ್ನು ಒದಗಿಸಬೇಕು. ನಿಗಮ ಮಂಡಳಿಗಳ ನೇಮಕಾತಿಯನ್ನು ಕೂಡಲೇ ನಿಲ್ಲಿಸಿ ಮಳೆಯಿಂದ ಹಾನಿಗೊಳಗಾದ ಹೊಲ ಗದ್ದೆಗಳ ಬದು ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಅಗತ್ಯ ಹಣಕಾಸು ನೆರವನ್ನು ಒದಗಿಸಬೇಕು. ಕಳೆದ ವರ್ಷದ ಪರಿಹಾರವನ್ನು ಕೊಡಬೇಕು ಎಂದು ಒತ್ತಾಯಿಸಿದರು.
ಯುವ ಘಟಕದ ಅಧ್ಯಕ್ಷ ಅಲೀಂ ಇನಾಂದಾರ, ಮುಖಂಡರಾದ ನಾಸಿರ್ ಹುಸೇನ್ ಉಸ್ತಾದ್, ಬಸವರಾಜ ತಡಕಲ್, ದೇವೇಗೌಡ ತೆಲ್ಲೂರ, ಸೈಯದ್ ಜಫರ್ ಹುಸೇನ್, ಮನೋಹರ ಪೊದ್ದಾರ ಇದ್ದರು.