<p><strong>ಕಾಳಗಿ</strong>: ತಾಲ್ಲೂಕಿನ ಮಾಡಬೂಳ ಗ್ರಾಮದ ಕಿರು ಮೃಗಾಲಯದ ಬಳಿ ರಾಜ್ಯ ಹೆದ್ದಾರಿಯಲ್ಲಿ ಜೀಪು ಮತ್ತು ಅಲ್ಟೊ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.</p><p>ಅಪಘಾತದ ತೀವ್ರತೆಗೆ ಕಾರು ಹಾಗೂ ಜೀಪ್ ನಜ್ಜುಗುಜ್ಜಾಗಿದೆ.</p><p>ಕಾರಿನಲ್ಲಿದ್ದ ಸೇಡಂ ನಗರದ ಹರಳಯ್ಯ ಬಸಪ್ಪ ಗುಂಡನೋರ (58) ಮೃತರು. ಕಾರಿನಲ್ಲಿ ಐವರು ಪ್ರಯಾಣಿಕರೊಂದಿಗೆ ಇಬ್ಬರು ಮಕ್ಕಳಿದ್ದರು. ಕಾರು ಸೇಡಂನಿಂದ ಕಲಬುರಗಿ ಕಡೆಗೆ, ಜೀಪು ಕಲಬುರಗಿಯಿಂದ ಮಳಖೇಡಕ್ಕೆ ಬರುತ್ತಿತ್ತು.</p><p>ಈ ಮಧ್ಯೆ ಅಪಘಾತ ಸಂಭವಿಸಿದ್ದು ಕಾರು ಚಾಲಕ ಹಣಮಂತ ಭೀಮಶಾ ಸಾತನೂರ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಪ್ರಭಾರ ಸಿಪಿಐ ವನಂಜಯಕರ್, ಪಿಎಸ್ಐ ಗೌತಮ ಗುತ್ತೇದಾರ, ಕ್ರೈಂ ಪಿಎಸ್ಐ ಸಿದ್ದಲಿಂಗ ಭೇಟಿ ನೀಡಿ ಪರಿಶೀಲಿಸಿದ್ದಾರೆ. </p><p>ಈ ಕುರಿತು ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ</strong>: ತಾಲ್ಲೂಕಿನ ಮಾಡಬೂಳ ಗ್ರಾಮದ ಕಿರು ಮೃಗಾಲಯದ ಬಳಿ ರಾಜ್ಯ ಹೆದ್ದಾರಿಯಲ್ಲಿ ಜೀಪು ಮತ್ತು ಅಲ್ಟೊ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.</p><p>ಅಪಘಾತದ ತೀವ್ರತೆಗೆ ಕಾರು ಹಾಗೂ ಜೀಪ್ ನಜ್ಜುಗುಜ್ಜಾಗಿದೆ.</p><p>ಕಾರಿನಲ್ಲಿದ್ದ ಸೇಡಂ ನಗರದ ಹರಳಯ್ಯ ಬಸಪ್ಪ ಗುಂಡನೋರ (58) ಮೃತರು. ಕಾರಿನಲ್ಲಿ ಐವರು ಪ್ರಯಾಣಿಕರೊಂದಿಗೆ ಇಬ್ಬರು ಮಕ್ಕಳಿದ್ದರು. ಕಾರು ಸೇಡಂನಿಂದ ಕಲಬುರಗಿ ಕಡೆಗೆ, ಜೀಪು ಕಲಬುರಗಿಯಿಂದ ಮಳಖೇಡಕ್ಕೆ ಬರುತ್ತಿತ್ತು.</p><p>ಈ ಮಧ್ಯೆ ಅಪಘಾತ ಸಂಭವಿಸಿದ್ದು ಕಾರು ಚಾಲಕ ಹಣಮಂತ ಭೀಮಶಾ ಸಾತನೂರ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಪ್ರಭಾರ ಸಿಪಿಐ ವನಂಜಯಕರ್, ಪಿಎಸ್ಐ ಗೌತಮ ಗುತ್ತೇದಾರ, ಕ್ರೈಂ ಪಿಎಸ್ಐ ಸಿದ್ದಲಿಂಗ ಭೇಟಿ ನೀಡಿ ಪರಿಶೀಲಿಸಿದ್ದಾರೆ. </p><p>ಈ ಕುರಿತು ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>